Select Your Language

Notifications

webdunia
webdunia
webdunia
webdunia

ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ದೇವತೆ ಪಟ್ಟ ಕೊಟ್ಟ ಅಭಿಮಾನಿಗಳು, ಯಾಕೆ ಗೊತ್ತಾ

Vijayalakshmi Darshan

Sampriya

ಬೆಂಗಳೂರು , ಗುರುವಾರ, 27 ಜೂನ್ 2024 (15:02 IST)
Photo Courtesy X
ಬೆಂಗಳೂರು:  'ನನಗೆ, ನಿಮಗೆ, ನಮ್ಮೆಲ್ಲರಿಗೆ ಇದು ಅಗ್ನಿಪರೀಕ್ಷೆಯ ಸಮಯವಾಗಿದ್ದು ತಾಳ್ಮೆ ಕಳೆದುಕೊಳ್ಳುವುದು ಬೇಡ. ನ್ಯಾಯಾಲಯಗಳ ಮೇಲೆ ವಿಶ್ವಾಸ ಇಡೋಣ. ಮತ್ತೆ ಒಳ್ಳೆಯ ಸಮಯ ಬರಲಿ ಎಂದು ದರ್ಶನ್ ಪರ ಅಭಿಮಾನಿಗಳಲ್ಲಿ ವಿಜಯಲಕ್ಷ್ಮೀ ಮನವಿ ಮಾಡಿದ್ದರು. ಇನ್ನೂ ಪತಿಯನ್ನು ಕಾಪಾಡಲು ನಾನಾ ಪ್ರಯತ್ನ ಮಾಡುತ್ತಿರುವ ವಿಜಯಲಕ್ಷ್ಮೀ ಅವರಿಗೆ ಅಭಿಮಾನಿಗಳು ಬೆಂಬಲ ಸೂಚಿಸಿದ್ದಾರೆ. ಚಿಂತಿಸಬೇಡಿ ಅತ್ತಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂದು ಬೆಂಬಲ ಸೂಚಿಸಿದ್ದಾರೆ.

ನಿನ್ನೆ ವಿಜಯಲಕ್ಷ್ಮೀ ಅವರು ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದರು. ಸದ್ಯ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದರ್ಶನ್ ಅವರು ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರುತ್ತಿದ್ದ ಹಾಗೇ ಪತ್ನಿ ವಿಜಯಲಕ್ಷ್ಮೀ ಅವರು ಪತಿಯನ್ನು ಪಾರು ಮಾಡಲು ನಾನಾ ಪ್ರಯತ್ನ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಪತಿಯನ್ನು ಬಿಟ್ಟುಕೊಡಲ್ಲ ಎಂದು ವಿಜಯಲಕ್ಷ್ಮೀ ರಾಜ್ಯದ ಹೆಸರಾಂತ ವಕೀಲರನ್ನು ನೇಮಕ ಮಾಡಿ ದರ್ಶನ್‌ರನ್ನು ಹೊರತರಲು ಪ್ರಯತ್ನಿಸಿದ್ದಾರೆ.

ಇನ್ನೂ ಪೊಲೀಸ್ ಕಸ್ಟಡಿ ಮುಗಿದು ಜೈಲು ಸೇರಿದ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮೀ ಹಾಗೂ ಮಗ ವಿನೀಶ್ ಭೇಟಿಯಾಗಿ ಧೈರ್ಯ ತುಂಬಿದ್ದರು. ಮುಂದಿನ ದಿನಗಳಲ್ಲಿ ಕಾನೂನು ಅಡಿಯಲ್ಲಿ ಯಾವ ರೀತಿ ಕೆಲಸ ಮಾಡಬೇಕೆಂದು ವಿಜಯಲಕ್ಷ್ಮೀ ಅವರು ದರ್ಶನ್ ಜತೆ ಮಾತನಾಡಿದ್ದಾರೆ.

ಇನ್ನೂ ದಾಸನನ್ನು ಜೈಲಿನಿಂದ ಬಿಡುಗಡೆ ಮಾಡಲು ವಿಜಯಲಕ್ಷ್ಮೀ ಅವರು ಕಷ್ಟ ಪಡುತ್ತಿದ್ದಾರೆ. ಇದನ್ನು ನೋಡಿದ ದಾಸನ ಅಭಿಮಾನಿಗಳು ವಿಜಯಲಕ್ಷ್ಮೀಗೆ ದೇವತೆ ಸ್ಥಾನವನ್ನು ನೀಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಕೊನೆಗೂ ದರ್ಶನ್ ದರ್ಶನ ಪಡೆಯಲು ಬರಲಿದ್ದಾರೆ ತಾಯಿ ಮೀನಾ, ಸಹೋದರ ದಿನಕರ್