Webdunia - Bharat's app for daily news and videos

Install App

ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ದೇವತೆ ಪಟ್ಟ ಕೊಟ್ಟ ಅಭಿಮಾನಿಗಳು, ಯಾಕೆ ಗೊತ್ತಾ

Sampriya
ಗುರುವಾರ, 27 ಜೂನ್ 2024 (15:02 IST)
Photo Courtesy X
ಬೆಂಗಳೂರು:  'ನನಗೆ, ನಿಮಗೆ, ನಮ್ಮೆಲ್ಲರಿಗೆ ಇದು ಅಗ್ನಿಪರೀಕ್ಷೆಯ ಸಮಯವಾಗಿದ್ದು ತಾಳ್ಮೆ ಕಳೆದುಕೊಳ್ಳುವುದು ಬೇಡ. ನ್ಯಾಯಾಲಯಗಳ ಮೇಲೆ ವಿಶ್ವಾಸ ಇಡೋಣ. ಮತ್ತೆ ಒಳ್ಳೆಯ ಸಮಯ ಬರಲಿ ಎಂದು ದರ್ಶನ್ ಪರ ಅಭಿಮಾನಿಗಳಲ್ಲಿ ವಿಜಯಲಕ್ಷ್ಮೀ ಮನವಿ ಮಾಡಿದ್ದರು. ಇನ್ನೂ ಪತಿಯನ್ನು ಕಾಪಾಡಲು ನಾನಾ ಪ್ರಯತ್ನ ಮಾಡುತ್ತಿರುವ ವಿಜಯಲಕ್ಷ್ಮೀ ಅವರಿಗೆ ಅಭಿಮಾನಿಗಳು ಬೆಂಬಲ ಸೂಚಿಸಿದ್ದಾರೆ. ಚಿಂತಿಸಬೇಡಿ ಅತ್ತಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂದು ಬೆಂಬಲ ಸೂಚಿಸಿದ್ದಾರೆ.

ನಿನ್ನೆ ವಿಜಯಲಕ್ಷ್ಮೀ ಅವರು ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದರು. ಸದ್ಯ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದರ್ಶನ್ ಅವರು ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರುತ್ತಿದ್ದ ಹಾಗೇ ಪತ್ನಿ ವಿಜಯಲಕ್ಷ್ಮೀ ಅವರು ಪತಿಯನ್ನು ಪಾರು ಮಾಡಲು ನಾನಾ ಪ್ರಯತ್ನ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಪತಿಯನ್ನು ಬಿಟ್ಟುಕೊಡಲ್ಲ ಎಂದು ವಿಜಯಲಕ್ಷ್ಮೀ ರಾಜ್ಯದ ಹೆಸರಾಂತ ವಕೀಲರನ್ನು ನೇಮಕ ಮಾಡಿ ದರ್ಶನ್‌ರನ್ನು ಹೊರತರಲು ಪ್ರಯತ್ನಿಸಿದ್ದಾರೆ.

ಇನ್ನೂ ಪೊಲೀಸ್ ಕಸ್ಟಡಿ ಮುಗಿದು ಜೈಲು ಸೇರಿದ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮೀ ಹಾಗೂ ಮಗ ವಿನೀಶ್ ಭೇಟಿಯಾಗಿ ಧೈರ್ಯ ತುಂಬಿದ್ದರು. ಮುಂದಿನ ದಿನಗಳಲ್ಲಿ ಕಾನೂನು ಅಡಿಯಲ್ಲಿ ಯಾವ ರೀತಿ ಕೆಲಸ ಮಾಡಬೇಕೆಂದು ವಿಜಯಲಕ್ಷ್ಮೀ ಅವರು ದರ್ಶನ್ ಜತೆ ಮಾತನಾಡಿದ್ದಾರೆ.

ಇನ್ನೂ ದಾಸನನ್ನು ಜೈಲಿನಿಂದ ಬಿಡುಗಡೆ ಮಾಡಲು ವಿಜಯಲಕ್ಷ್ಮೀ ಅವರು ಕಷ್ಟ ಪಡುತ್ತಿದ್ದಾರೆ. ಇದನ್ನು ನೋಡಿದ ದಾಸನ ಅಭಿಮಾನಿಗಳು ವಿಜಯಲಕ್ಷ್ಮೀಗೆ ದೇವತೆ ಸ್ಥಾನವನ್ನು ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments