ಜೈಲಿನಲ್ಲಿ ತಲೆ ಬೋಳಿಸಿಕೊಂಡ ದರ್ಶನ್, ಅದಕ್ಕೂ ಇದೆ ಕಾರಣ

Krishnaveni K
ಭಾನುವಾರ, 14 ಜುಲೈ 2024 (13:42 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಈಗ ತಮ್ಮ ಕೂದಲುಗಳಿಗೆ ಸಂಪೂರ್ಣವಾಗಿ ಕತ್ತರಿ ಹಾಕಿಕೊಂಡಿದ್ದಾರಂತೆ. ಇದಕ್ಕೆ ಕಾರಣವೂ ಇದೆ.

ನಟ ದರ್ಶನ್ ತಮ್ಮ ಕೂದಲುಗಳಿಗೆ ಕತ್ತರಿ ಹಾಕಿಸಿಕೊಂಡಿದ್ದಾರೆ ಎಂದು ಜೈಲಿನ ಮೂಲಗಳಿಂದ ತಿಳಿದುಬಂದಿದೆ. ದರ್ಶನ್ ಈ ಮೊದಲೇ ವಿಗ್ ಬಳಸಿಕೊಳ್ಳುತ್ತಿದ್ದರು. ಆದರೆ ಈಗ ಜೈಲಿನಲ್ಲಿ ಸಹಜ ಕೂದಲು ಮತ್ತು ವಿಗ್ ಕೂದಲಗಳ ಸಂರಕ್ಷಣೆ ಕಷ್ಟವಾಗುತ್ತಿದೆ. ಇದಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲು ನ್ಯಾಯಾಲಯದ ಅನುಮತಿ ಬೇಕಾಗುತ್ತದೆ.
  
ಆದರೆ ಸದ್ಯಕ್ಕೆ ಇದಕ್ಕೆಲ್ಲಾ ಅನುಮತಿ ಸಿಗಲ್ಲ. ಹೀಗಾಗಿ ಇದರ ತಲೆನೋವೇ ಬೇಡವೆಂದು ದರ್ಶನ್ ತಮ್ಮ ಕೂದಲುಗಳಿಗೆ ಕತ್ತರಿ ಹಾಕಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಈಗಾಗಲೇ ದರ್ಶನ್ ಜೈಲಿನಲ್ಲಿ ತಮ್ಮ ದೈನಂದಿನ ವರ್ಕೌಟ್ ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ಚಿಂತೆಯಲ್ಲಿದ್ದಾರೆ.

ಹೀಗಾಗಿ ಮೈಕಟ್ಟು ಕಾಯ್ದುಕೊಳ್ಳಲು ಯೋಗದ ಮೊರೆ ಹೋಗಿದ್ದಾರೆ ಎಂಬ ಮಾಹಿತಿಯಿದೆ. ಇದರ ಜೊತೆಗೆ ಸಮಯ ಕಳೆಯಲು ಪುಸ್ತಕಗಳನ್ನು ಗ್ರಂಥಾಲಯದಿಂದ ಪಡೆದು ಓದುತ್ತಿದ್ದಾರೆ ಎನ್ನಲಾಗಿದೆ. ಸದಾ ಐಷಾರಾಮಿ ಜೀವನ ಶೈಲಿ ನಡೆಸುತ್ತಿದ್ದ ದರ್ಶನ್ ಗೆ ಈಗ ಜೈಲಿನ ವಾತಾವರಣಕ್ಕೆ ಹೊಂದುವುದೇ ಕಷ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments