Webdunia - Bharat's app for daily news and videos

Install App

ಮತ್ತೊಂದು ಜೈಲಿಗೆ ಹೋದ್ರೂ ತಾನು ಕಿಂಗ್ ಎಂದು ತೋರಿಸಿದ ದರ್ಶನ್

Krishnaveni K
ಗುರುವಾರ, 29 ಆಗಸ್ಟ್ 2024 (11:21 IST)
ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ತಪ್ಪಿಗೆ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ ತಾವು ಎಲ್ಲಿದ್ದರೂ ಕಿಂಗ್ ಎನ್ನುವ ಸಂದೇಶ ಕೊಟ್ಟಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ವಿಲಾಸೀ ಜೀವನ ನಡೆಸುತ್ತಿರುವ ಫೋಟೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಅವರ ವಿರುದ್ಧ ಮತ್ತೆ ಎರಡು ಪ್ರಕರಣ ದಾಖಲಾಗಿತ್ತು. ಇದೇ ತಪ್ಪಿಗೆ ಅವರನ್ನು ಕೋರ್ಟ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಅನುಮತಿ ನೀಡಿತ್ತು.

ಅದರಂತೆ ಇಂದು ಬೆಳ್ಳಂ ಬೆಳಿಗ್ಗೆಯೇ ಪೊಲೀಸರು ಅವರನ್ನು ಬಿಗಿ ಭದ್ರತೆಯಲ್ಲಿ ಬಳ್ಳಾರಿ ಜೈಲಿಗೆ ಕರೆತಂದಿದ್ದಾರೆ. ಬಳ್ಳಾರಿ ಕೇಂದ್ರ ಕಾರಾಗೃಹದ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಅವರನ್ನು ನೋಡಲು ಜಮಾಯಿಸಿದ್ದರು. ಪೊಲೀಸ್ ವಾಹನದಿಂದಿಳಿದ ದರ್ಶನ್ ನೇರವಾಗಿ ಜೈಲು ಪ್ರವೇಶ ಮಾಡಿದ್ದಾರೆ.

ಈ ವೇಳೆ ಅವರ ಗತ್ತು ನೋಡಿ ಅಭಿಮಾನಿಗಳು ಎಲ್ಲೇ ಹೋದರೂ ರಾಜ ರಾಜನಂತೇ ಇರುತ್ತಾರೆ ಎಂದಿದ್ದಾರೆ. ಜೈಲಿಗೆ ಹೋಗುವಾಗಲೂ ಬ್ರ್ಯಾಂಡೆಡ್ ಟಿ ಶರ್ಟ್, ಸನ್ ಗ್ಲಾಸ್ ಹಾಕಿಕೊಂಡು ಗತ್ತಿನಿಂದಲೇ ಒಳ ಹೋಗಿದ್ದಾರೆ. ಈ ಹಿಂದೆ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಕೈಗೆ ಬ್ಯಾಂಡೇಜ್ ಕಟ್ಟಿಕೊಂಡು ಜೈಲಿನೊಳಗೆ ಹೆಜ್ಜೆ ಹಾಕಿದ್ದಾರೆ. ದರ್ಶನ್ ಕೂದಲು ಹೆಚ್ಚು ಕಡಿಮೆ ಉದುರಿ ಹೋಗಿದ್ದು, ಇಂದು ತಮಗೆ ಜೈಕಾರ ಹಾಕುತ್ತಿದ್ದ ಅಭಿಮಾನಿಗಳತ್ತ ತಿರುಗಿಯೂ ನೋಡದೇ ಜೈಲಿನೊಳಗೆ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments