Webdunia - Bharat's app for daily news and videos

Install App

ಮತ್ತೊಂದು ಜೈಲಿಗೆ ಹೋದ್ರೂ ತಾನು ಕಿಂಗ್ ಎಂದು ತೋರಿಸಿದ ದರ್ಶನ್

Krishnaveni K
ಗುರುವಾರ, 29 ಆಗಸ್ಟ್ 2024 (11:21 IST)
ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ತಪ್ಪಿಗೆ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ ತಾವು ಎಲ್ಲಿದ್ದರೂ ಕಿಂಗ್ ಎನ್ನುವ ಸಂದೇಶ ಕೊಟ್ಟಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ವಿಲಾಸೀ ಜೀವನ ನಡೆಸುತ್ತಿರುವ ಫೋಟೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಅವರ ವಿರುದ್ಧ ಮತ್ತೆ ಎರಡು ಪ್ರಕರಣ ದಾಖಲಾಗಿತ್ತು. ಇದೇ ತಪ್ಪಿಗೆ ಅವರನ್ನು ಕೋರ್ಟ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಅನುಮತಿ ನೀಡಿತ್ತು.

ಅದರಂತೆ ಇಂದು ಬೆಳ್ಳಂ ಬೆಳಿಗ್ಗೆಯೇ ಪೊಲೀಸರು ಅವರನ್ನು ಬಿಗಿ ಭದ್ರತೆಯಲ್ಲಿ ಬಳ್ಳಾರಿ ಜೈಲಿಗೆ ಕರೆತಂದಿದ್ದಾರೆ. ಬಳ್ಳಾರಿ ಕೇಂದ್ರ ಕಾರಾಗೃಹದ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಅವರನ್ನು ನೋಡಲು ಜಮಾಯಿಸಿದ್ದರು. ಪೊಲೀಸ್ ವಾಹನದಿಂದಿಳಿದ ದರ್ಶನ್ ನೇರವಾಗಿ ಜೈಲು ಪ್ರವೇಶ ಮಾಡಿದ್ದಾರೆ.

ಈ ವೇಳೆ ಅವರ ಗತ್ತು ನೋಡಿ ಅಭಿಮಾನಿಗಳು ಎಲ್ಲೇ ಹೋದರೂ ರಾಜ ರಾಜನಂತೇ ಇರುತ್ತಾರೆ ಎಂದಿದ್ದಾರೆ. ಜೈಲಿಗೆ ಹೋಗುವಾಗಲೂ ಬ್ರ್ಯಾಂಡೆಡ್ ಟಿ ಶರ್ಟ್, ಸನ್ ಗ್ಲಾಸ್ ಹಾಕಿಕೊಂಡು ಗತ್ತಿನಿಂದಲೇ ಒಳ ಹೋಗಿದ್ದಾರೆ. ಈ ಹಿಂದೆ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಕೈಗೆ ಬ್ಯಾಂಡೇಜ್ ಕಟ್ಟಿಕೊಂಡು ಜೈಲಿನೊಳಗೆ ಹೆಜ್ಜೆ ಹಾಕಿದ್ದಾರೆ. ದರ್ಶನ್ ಕೂದಲು ಹೆಚ್ಚು ಕಡಿಮೆ ಉದುರಿ ಹೋಗಿದ್ದು, ಇಂದು ತಮಗೆ ಜೈಕಾರ ಹಾಕುತ್ತಿದ್ದ ಅಭಿಮಾನಿಗಳತ್ತ ತಿರುಗಿಯೂ ನೋಡದೇ ಜೈಲಿನೊಳಗೆ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments