Webdunia - Bharat's app for daily news and videos

Install App

ಚಾರ್ಜ್‌ಶೀಟ್‌ನ ಕರಾಳ ಮುಖ ಹೊರಬೀಳುತ್ತಿದ್ದ ಹಾಗೇ ಪತ್ನಿ ಜತೆ ಮಾತನಾಡಿದ ದರ್ಶನ್

Sampriya
ಮಂಗಳವಾರ, 10 ಸೆಪ್ಟಂಬರ್ 2024 (17:56 IST)
ಬಳ್ಳಾರಿ: ಜಾರ್ಜ್‌ಶೀಟ್‌ನಲ್ಲಿರುವ ರೇಣುಕಾಸ್ವಾಮಿ ಹತ್ಯೆಯ ಭೀಕರತೆಯ ವಿಚಾರಗಳು ಹಾಗೂ ಪವಿತ್ರಾ ಗೌಡ ಜತೆಗಿನ ಲವ್ ರಿಲೇಶನ್‌ ಶಿಪ್‌ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಭಿತ್ತರವಾಗುತ್ತಿದ್ದ ಹಾಗೇ ಕೊಲೆ ಆರೋಪಿ ದರ್ಶನ್‌ ಪತ್ನಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಜೊತೆ ಪ್ರಿಸನ್ ಕಾಲ್ ಸಿಸ್ಟಮ್ ಮೂಲಕ 5 ನಿಮಿಷಗಳ ಕಾಲ ದರ್ಶನ್ ಮಾತನಾಡಿದ್ದಾರೆ.

ಇತ್ತ ಜಾರ್ಜ್‌ಶೀಟ್‌ನಲ್ಲಿರುವ ಹತ್ಯೆಯ ಒಂದೊಂದೆ ವಿಚಾರಗಳು ಹೊರಬೀಳುತ್ತಿರುವುದನ್ನು ಟಿವಿಯಲ್ಲಿ ನೋಡಿ ಜೈಲಿನಲ್ಲಿ ದರ್ಶನ್ ಕಂಗಲಾಗಿದ್ದಾರೆ ಎಂದು ತಿಳಿದುಬಂದಿದೆ.

ಹೈಸೆಕ್ಯೂರಿಟಿ ಸೆಲ್‌ನಿಂದಲೇ ಪ್ರಿಸನ್ ಕಾಲ್ ಸಿಸ್ಟಮ್ ಮೂಲಕ ಮಾತನಾಡಿದ ದರ್ಶನ್ ಅವರು ನಾಳೆ ಜೈಲಿಗೆ ಬಂದು ಭೇಟಿಯಾಗುವಂತೆ ಕೇಳಿಕೊಂಡಿದ್ದಾರೆ. ಅದಲ್ಲದೆ ಪತ್ನಿ ಜತೆ ಮಾತನಾಡುವಾಗ ಆರೋಪಿ ದರ್ಶನ್ ಭಾವುಕರಾಗಿದ್ದಾರೆ.

ಬುಧವಾರ ಜೈಲಿಗೆ ಬರುವಂತೆ ಪತ್ನಿಗೆ ಆರೋಪಿ ತಿಳಿಸಿದ್ದಾರೆ. ಈ ಬಗ್ಗೆ ಜೈಲಾಧಿಕಾರಿಗಳಿಗೂ ದರ್ಶನ್‌ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಹಾಗೂ ದರ್ಶನ್ ತಾಯಿ ಮೀನಾ ಬುಧವಾರ ಸಂಜೆ 4 ಗಂಟೆಯ ನಂತರ ಬಳ್ಳಾರಿ ಸೆಂಟ್ರಲ್ ಜೈಲಿಗೆ ಬರಲಿದ್ದಾರೆ ಎಂದು ಜೈಲಾಧಿಕಾರಿ ಮೂಲಗಳಿಂದ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments