Webdunia - Bharat's app for daily news and videos

Install App

ಚುನಾವಣೆ ಮುಗಿದ ಮೇಲೂ ರಾಜ್ಯ ಸರ್ಕಾರಕ್ಕೆ ಟಾಂಗ್ ಕೊಟ್ಟ ನಟ ದರ್ಶನ್

Webdunia
ಭಾನುವಾರ, 28 ಏಪ್ರಿಲ್ 2019 (09:21 IST)
ಬೆಂಗಳೂರು: ಏನೇ ಟೀಕೆ ಟಿಪ್ಪಣಿಗಳಿದ್ದರೂ ಚುನಾವಣೆ ಮುಗಿಯುವವರೆಗೆ ಮಾತ್ರ ಎನ್ನುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಚುನಾವಣೆ ಬಳಿಕವೂ ಸರ್ಕಾರಕ್ಕೆ ಪರೋಕ್ಷವಾಗಿ ಚಾಟಿ ಬೀಸಿದ್ದಾರೆ.


ಸುಮಲತಾ ಅಂಬರೀಶ್ ಪರವಾಗಿ ಮಂಡ್ಯದಲ್ಲಿ ಪ್ರಚಾರ ಮಾಡುವಾಗ ದರ್ಶನ್ ಸಿಎಂ ಕುಮಾರಸ್ವಾಮಿಗೆ ಹಲವು ಬಾರಿ ಟಾಂಗ್ ಕೊಟ್ಟಿದ್ದರು. ಆದರೆ ಇದೀಗ ನಿನ್ನೆ ಬೆಂಗಳೂರಿನ ಕಾಲೇಜೊಂದಕ್ಕೆ ಅತಿಥಿಯಾಗಿ ಹೋಗಿದ್ದ ವೇಳೆ ಮಾತನಾಡುವಾಗ ಟಾಂಗ್ ನೀಡಿದ್ದಾರೆ.

ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ದರ್ಶನ್ ನಾನಂತೂ ಕಾಲೇಜಿಗೆ ಹೋಗಿಲ್ಲ. ನೀವಾದ್ರೂ ಹೋಗಿ ಚೆನ್ನಾಗಿ ಓದಿ ಎಂದು ಕಿವಿ ಮಾತು ಹೇಳಿದರು. ಬಳಿಕ ‘ಸರ್ಕಾರ ರೈತರ ಸಾಲಮನ್ನಾ ಮಾಡ್ತೀವಿ ಅಂತಿದ್ದಾರೆ. ಸಾಲ ಮನ್ನಾ ಮಾಡುವ ಬದಲು ರೈತರ ಬೆಳೆಗಳಿಗೆ ನ್ಯಾಯವಾದ ಬೆಲೆ ಕೊಟ್ಟರೆ ಅವರೇ ಸಾಲ ತೀರಿಸುತ್ತಾರೆ’ ಎಂದಿದ್ದಾರೆ.

ಈ ಸಂದರ್ಭದಲ್ಲಿ ದರ್ಶನ್ ಗೆ ವಿದ್ಯಾರ್ಥಿಗಳು ಪ್ರೀತಿಯಿಂದ ಬೆಳ್ಳಿ ಗದೆ ನೀಡಲು ಮುಂದಾಗ ಅವರೂ ಅಷ್ಟೇ ಪ್ರೀತಿಯಿಂದ ಸ್ವೀಕರಿಸಲು ನಿರಾಕರಿಸಿ ಈ ಹಣವನ್ನು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಬಳಸಿ ಎಂದು ಸಲಹೆ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments