ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ಅಂದುಕೊಂಡಂತೆ ಯಾವುದೂ ಇಲ್ಲ

Krishnaveni K
ಶನಿವಾರ, 16 ಆಗಸ್ಟ್ 2025 (13:29 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ರದ್ದಾಗಿರುವ ಹಿನ್ನಲೆಯಲ್ಲಿ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಈಗ ಎಲ್ಲವೂ ಮೊದಲಿನಂತಿಲ್ಲ.

ನಟ ದರ್ಶನ್ ಆಂಡ್ ಗ್ಯಾಂಗ್ ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಅವರಿಗೆ ರಾಜಾತಿಥ್ಯ ನೀಡಿದ್ದು ಸುಪ್ರೀಂಕೋರ್ಟ್ ಗಮನಕ್ಕೂ ಬಂದಿದೆ. ಈ ಹಿನ್ನಲೆಯಲ್ಲಿ ಈ ಬಾರಿ ಅಂತಹ ಯಾವುದೇ ವಿಐಪಿ ಟ್ರೀಟ್ಮೆಂಟ್ ಕೊಡಬಾರದು ಎಂದು ಖಡಕ್ ಸೂಚನೆ ನೀಡಿತ್ತು.

ಹೀಗಾಗಿ ಕಾರಾಗೃಹ ಎಡಿಜಿಪಿ ಬಿ ದಯಾನಂದ್ ಸಭೆ ನಡೆಸಿ ಯಾವುದೇ ವಿಶೇಷ ಸವಲತ್ತು ನೀಡದಂತೆ ಎಚ್ಚರಿಕೆ ನೀಡಿದ್ದರು. ಆದ್ದರಿಂದ ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ಸಾಮಾನ್ಯ ಕೈದಿಗಳಂತೇ ನೋಡಿಕೊಳ್ಳಲಾಗುತ್ತಿದೆ. ಇದರಿಂದ ದರ್ಶನ್ ಚಡಪಡಿಸುತ್ತಿದ್ದಾರೆ.

ಐಷಾರಾಮಿ ಜಿವನಕ್ಕೆ ಒಗ್ಗಿ ಹೋಗಿರುವ ದರ್ಶನ್ ಗೆ ಈಗ ಬೆನ್ನು ನೋವು ಕಾಡುತ್ತಿದೆಯಂತೆ. ರಾತ್ರಿ ನಿದ್ರೆಯಿಲ್ಲದೇ ಚಡಪಡಿಸುತ್ತಿದ್ದಾರೆ. ಇತರೆ ಕೈದಿಗಳ ಸ್ಥಿತಿಯೂ ಹೆಚ್ಚು ಕಡಿಮೆ ಇದೇ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments