Select Your Language

Notifications

webdunia
webdunia
webdunia
webdunia

ದರ್ಶನ್ ರ ಒಂದೇ ಕರೆಗೆ ಓಗೊಟ್ಟ ಅಭಿಮಾನಿಗಳು

ದರ್ಶನ್ ರ ಒಂದೇ ಕರೆಗೆ ಓಗೊಟ್ಟ ಅಭಿಮಾನಿಗಳು
ಬೆಂಗಳೂರು , ಭಾನುವಾರ, 6 ಜೂನ್ 2021 (09:55 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೊರೋನಾ ಸಂಕಷ್ಟ ಕಾಲದಲ್ಲಿ ಆಹಾರವಿಲ್ಲದೇ ಸಂಕಷ್ಟಕ್ಕೀಡಾಗಿರುವ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುವಂತೆ ನಿನ್ನೆ ಮನವಿ ಮಾಡಿದ್ದರು.


‘ದಾಸ’ನ ಮನವಿಗೆ ಅವರ ಅಭಿಮಾನಿಗಳು ಸೂಕ್ತವಾಗಿ ಪ್ರತಿಕ್ರಿಯಿಸಿದ್ದಾರೆ. ಡಿ ಬಾಸ್ ನೀಡಿದ ಒಂದೇ ಒಂದು ಕರೆಗೆ ಓಗೊಟ್ಟ ಅಭಿಮಾನಿಗಳು ಮೈಸೂರು ಮೃಗಾಲಯದ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ಸ್ಪಂದಿಸಿದ್ದಾರೆ.

ತಮ್ಮ ಅಭಿಮಾನಿಗಳು ಪ್ರಾಣಿಗಳನ್ನು ದತ್ತು ತೆಗೆದುಕೊಂಡಿರುವ ವಿಚಾರವನ್ನು ಸಾಮಾಜಿಕ ಜಾಲತಾಣದ ಮೂಲಕ ಪ್ರಕಟಿಸಿರುವ ದರ್ಶನ್, ಕರೆಗೆ ಓಗೊಟ್ಟ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೋನಾ ಜಾಗೃತಿಗೆ ಧ್ವನಿಗೂಡಿಸಿದ ಪುನೀತ್ ರಾಜಕುಮಾರ್