Webdunia - Bharat's app for daily news and videos

Install App

ದರ್ಶನ್ ಆಂಡ್ ಗ್ಯಾಂಗ್ ಬಂದ ಕೋರ್ಟ್ ಸುತ್ತಮುತ್ತ ಜನವೋ ಜನ

Krishnaveni K
ಗುರುವಾರ, 20 ಜೂನ್ 2024 (15:49 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಗ್ಯಾಂಗ್ ಇದೀಗಷ್ಟೇ ಕೋರ್ಟ್ ಗೆ ಹಾಜರಾಗಿದ್ದಾರೆ. ಪೊಲೀಸ್ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ ಇಂದು ದರ್ಶನ್ ಮತ್ತು ಇತರೆ ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದೆ.

ಪೊಲೀಸ್ ವಾಹನದಲ್ಲಿ ದರ್ಶನ್ ಮತ್ತು ಇತರರು ಬಂದಿಳಿಯುತ್ತಿದ್ದಂತೇ ಆರೋಪಿಗಳನ್ನು ನೋಡುವುದಕ್ಕೆಂದೇ ಅಲ್ಲಿ ಕುತೂಹಲದಿಂದ ಜನ ಕಾಯುತ್ತಿದ್ದರು. ದರ್ಶನ್ ಅಭಿಮಾನಿಗಳು ಬರಬಹುದು ಎಂದು ಮೊದಲೇ ಊಹಿಸಿದ್ದ ಪೊಲೀಸರು ಕೋರ್ಟ್ ಸುತ್ತ ಬಿಗಿ ಭದ್ರತೆ ಒದಗಿಸಿದ್ದಾರೆ.

ಮೊನ್ನೆಯೂ ದರ್ಶನ್ ಕೋರ್ಟ್ ಗೆ ಬಂದಾಗ ಸಾಕಷ್ಟು ಜನ ಅಭಿಮಾನಿಗಳೂ ಜಮಾಯಿಸಿದ್ದರು. ಇಂದೂ ಕೂಡಾ ಅದೇ ಸನ್ನಿವೇಶವಿದೆ. ಇದೀಗ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಇದುವರೆಗೆ ಪೊಲೀಸರು ಸಂಗ್ರಹಿಸಿರುವ ಎಲ್ಲಾ ಸಾಕ್ಷ್ಯಾಧಾರಗಳನ್ನು ಇಂದು ಕೋರ್ಟ್ ಗೆ ಒದಗಿಸಲಿದ್ದಾರೆ.

ಇವುಗಳನ್ನು ಪರಿಶೀಲಿಸಿ ಕೋರ್ಟ್ ಮುಂದಿನ ತೀರ್ಮಾನ ತೆಗೆದುಕೊಳ್ಳಲಿದೆ. ಹೆಚ್ಚಿನ ವಿಚಾರಣೆ ಅಗತ್ಯವಿದ್ದರೆ ಮಾತ್ರ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಬಹುದು. ಇಲ್ಲದೇ ಹೋದರೆ ದರ್ಶನ್ ಆಂಡ್ ಗ್ಯಾಂಗ್ ನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲು ಕೋರ್ಟ್ ಆದೇಶ ನೀಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments