Webdunia - Bharat's app for daily news and videos

Install App

Darshan Thoogudeepa: ನಟ ದರ್ಶನ್ ಗೆ ಸುಪ್ರೀಂಕೋರ್ಟ್ ನೋಟಿಸ್: ದಾಸನ ಜೊತೆಗಿರುವ 7 ಮಂದಿಗೆ ಕಾದಿದೆ ಗ್ರಹಚಾರ

Krishnaveni K
ಶುಕ್ರವಾರ, 24 ಜನವರಿ 2025 (13:49 IST)
ನವದೆಹಲಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಓಡಾಡಿಕೊಂಡಿರುವ ನಟ ದರ್ಶನ್ ಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದ್ದು ಅವರ ಜೊತೆಗೆ 7 ಜನರಿಗೆ ಗ್ರಹಚಾರ ಕಾದಿದೆ.

ನಟ ದರ್ಶನ್ ಗೆ ಬೆನ್ನು ನೋವಿನ ಕಾರಣಕ್ಕೆ ಮೊದಲು ಮಧ್ಯಂತರ ಜಾಮೀನು ನೀಡಲಾಗಿತ್ತು. ಅದಾದ ಬಳಿಕ ಅವರ ಪರ ವಕೀಲರು ಹೈಕೋರ್ಟ್ ನಲ್ಲಿ ರೆಗ್ಯುಲರ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ಜೊತೆಗೆ ಏಳು ಪ್ರಮುಖ ಆರೋಪಿಗಳಿಗೆ ರೆಗ್ಯುಲರ್ ಬೇಲ್ ಮಂಜೂರಾಗಿತ್ತು.

ಮೊದಲು ಒಂದಷ್ಟು ದಿನ ತಮ್ಮ ಪಾಡಿಗೆ ಮನೆಯೊಳಗೇ ಇದ್ದ ದರ್ಶನ್, ಪವಿತ್ರಾ ಗೌಡ ಈಗ ತಮ್ಮದೇ ವೃತ್ತಿ ಬದುಕಿನಲ್ಲಿ ನಿಧಾನವಾಗಿ ತೊಡಗಿಸಿಕೊಳ್ಳುತ್ತಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ಮರೆತು ತಮ್ಮ ಪಾಡಿಗೆ ತಾವು ಹಾಯಾಗಿರುವ ಹೊತ್ತಿನಲ್ಲೇ ಪೊಲೀಸರು ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಇದೀಗ ಸುಪ್ರೀಂಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಮಂದಿಗೆ ನೋಟಿಸ್ ಜಾರಿ ಮಾಡಿದೆ. ಒಂದು ವೇಳೆ ವಿಚಾರಣೆ ನಡೆದು ಸುಪ್ರೀಂಕೋರ್ಟ್ ಈ ಮೊದಲು ಹೈಕೋರ್ಟ್ ನೀಡಿರುವ ರೆಗ್ಯುಲರ್ ಜಾಮೀನು ರದ್ದು ಮಾಡಿದರೆ ದರ್ಶನ್ ಮತ್ತೆ ಜೈಲು ಸೇರಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments