Webdunia - Bharat's app for daily news and videos

Install App

Darshan: ಕೋರ್ಟ್ ಗೆ ಹಾಜರಾಗಲು ಬೆನ್ನು ನೋವು, ವಾಮನ ಸಿನಿಮಾ ನೋಡಲು ಥಿಯೇಟರ್ ಗೆ ಹಾಜರಾದ ದರ್ಶನ್

Krishnaveni K
ಗುರುವಾರ, 10 ಏಪ್ರಿಲ್ 2025 (09:31 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೊನ್ನೆ ಕೋರ್ಟ್ ಗೆ ಹಾಜರಾಗಬೇಕಿದ್ದ ನಟ ದರ್ಶನ್ ಬೆನ್ನು ನೋವಿನ ನೆಪ ಹೇಳಿ ತಪ್ಪಿಸಿಕೊಂಡಿದ್ದರು. ಆದರೆ ನಿನ್ನೆ ತಮ್ಮ ಆಪ್ತ ಧನ್ವೀರ್ ಗೌಡ ಅಭಿನಯದ ವಾಮನ ಸಿನಿಮಾವನ್ನು ವೀಕ್ಷಿಸಲು ಥಿಯೇಟರ್ ಗೆ ಬಂದಿದ್ದಾರೆ. ಇದಕ್ಕೆ ಜನರ ಪ್ರತಿಕ್ರಿಯೆ ಹೇಗಿತ್ತು ನೋಡಿ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ನಟ ದರ್ಶನ್ ಮತ್ತು ಎಲ್ಲಾ ಆರೋಪಿಗಳಿಗೆ ತಿಂಗಳಿಗೊಮ್ಮೆ ಕಡ್ಡಾಯವಾಗಿ ಕೋರ್ಟ್ ಗೆ ಹಾಜರಾಗಲು ಷರತ್ತು ವಿಧಿಸಲಾಗಿತ್ತು. ಕಳೆದ ತಿಂಗಳು ಕೋರ್ಟ್ ಗೆ ಬಂದಿದ್ದ ದರ್ಶನ್ ಈ ಬಾರಿ ಬೆನ್ನು ನೋವಿನ ನೆಪ ಹೇಳಿ ತಪ್ಪಿಸಿಕೊಂಡಿದ್ದರು.

ಕೋರ್ಟ್ ಕೂಡಾ ವಿಚಾರಣೆಗೆ ತಪ್ಪಿಸಿಕೊಳ್ಳುವಂತಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿತ್ತು. ಆದರೆ ಮೊನ್ನೆ ಬೆನ್ನು ನೋವಿನ ನೆಪ ಹೇಳಿ ತಪ್ಪಿಸಿಕೊಂಡಿದ್ದ ದರ್ಶನ್ ನಿನ್ನೆ ವಾಮನ ಸಿನಿಮಾವನ್ನು ವೀಕ್ಷಿಸಲು ಥಿಯೇಟರ್ ಗೆ ಬಂದಿದ್ದಾರೆ.

ಇದಕ್ಕೆ ಜನ ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ. ಇದೇ ವ್ಯಕ್ತಿಗೆ ಅಲ್ವಾ ಮೊನ್ನೆ ಬೆನ್ನು ನೋವಿದ್ದಿದ್ದು. ವಿಚಾರಣೆಗೆ ಬೆನ್ನು ನೋವು, ಸಿನಿಮಾ ನೋಡಲು ಯಾವುದೇ ಸಮಸ್ಯೆಯಿಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ. ಹಾಗಿದ್ದರೆ ಬೆನ್ನು ನೋವು ಕೇವಲ ವಿಚಾರಣೆ ವಿಚಾರ ಬಂದರೆ ಮಾತ್ರ ಬಂದು ಹೋಗುತ್ತಾ ಎಂದು ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments