Webdunia - Bharat's app for daily news and videos

Install App

ಜೈಲಿನಿಂದಲೇ ದರ್ಶನ್ ಗೆ ವಿಚಾರಣೆ ಐಟಿ ವಿಚಾರಣೆ ಸಂಕಷ್ಟ

Krishnaveni K
ಗುರುವಾರ, 26 ಸೆಪ್ಟಂಬರ್ 2024 (10:46 IST)
ಬಳ್ಳಾರಿ: ರೇಣುಕಾಸ್ವಾಮಿ ಮರ್ಡರ್ ಕೇಸ್ ಮುಚ್ಚಿಹಾಕಲು ಲಕ್ಷಾಂತರ ರೂಪಾಯಿ ಹಣ ವರ್ಗಾವಣೆ ಮಾಡಿದ್ದ ನಟ ದರ್ಶನ್ ಗೆ ಈಗ ಐಟಿ ದಾಳಿ ಸಂಕಷ್ಟ ಎದುರಾಗಿದೆ.

ರೇಣುಕಾಸ್ವಾಮಿ ಮರ್ಡರ್ ಕೇಸ್ ಮುಚ್ಚಿಹಾಕಲು ದರ್ಶನ್ 80 ಲಕ್ಷ ರೂ.ಗಳಷ್ಟು ಖರ್ಚು ಮಾಡಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ಜೈಲಿನಲ್ಲಿ ರಾಜಾತಿಥ್ಯ ಪಡೆಯಲು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳೊಂದಿಗೆ 8 ಲಕ್ಷ ರೂ.ಗಳ ಡೀಲ್ ಮಾಡಿಕೊಂಡಿದ್ದರು ಎಂಬ ವದಂತಿಯೂ ಇದೆ.

ಈ ವಿಚಾರವನ್ನು ಪೊಲೀಸರು ಐಟಿ ಇಲಾಖೆಯ ಗಮನಕ್ಕೆ ತಂದಿದ್ದಾರೆ. ಈ ಹಿನ್ನಲೆಯಲ್ಲಿ ಐಟಿ ಅಧಿಕಾರಿಗಳು ದರ್ಶನ್ ಹಣಕಾಸಿನ ವ್ಯವಹಾರಕ್ಕೆ ಸಂಬಂಧಪಟ್ಟಂತೆ ದರ್ಶನ್ ರನ್ನು ವಿಚಾರಣೆ ನಡೆಸಲಿದ್ದಾರೆ. ಸತತ ಎರಡು ದಿನಗಳ ಕಾಲ ವಿಚಾರಣೆ ನಡೆಯಲಿದ್ದು, ಬಳ್ಳಾರಿ ಜೈಲಿನಿಂದಲೇ ದರ್ಶನ್ ವಿಚಾರಣೆ ಎದುರಿಸಲಿದ್ದಾರೆ.

ಈಗಾಗಲೇ ಹತ್ಯೆ ಪ್ರಕರಣದಲ್ಲಿ ಪೊಲೀಸರು ಅವರ ಬುಡಮೇಲು ಮಾಡಿ ಮಾಹಿತಿ ಕಲೆ ಹಾಕಿದ್ದರು. ದರ್ಶನ್ ವೈಯಕ್ತಿಕ ವಿಚಾರಗಳೆಲ್ಲವೂ ಈಗ ಬಹಿರಂಗವಾಗಿದೆ. ಇದೀಗ ಹಣಕಾಸಿನ ವ್ಯವಹಾರದ ಬಗ್ಗೆ ಹಲವು ವಿಚಾರಗಳು ಹೊರಬೀಳುವ ಸಾಧ್ಯತೆಯಿದೆ. ಅಷ್ಟೊಂದು ಹಣ ನಿಮಗೆ ಹೇಗೆ ಬಂತು, ಹಣದ ಮೂಲವೇನು ಎಂಬ ಬಗ್ಗೆ ಐಟಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments