Darshan Thoogudeepa: ಪವಿತ್ರಾ ಗೌಡರನ್ನು ಮತ್ತೆ ಭೇಟಿ ಮಾಡಲಿದ್ದಾರೆ ದರ್ಶನ್: ಎಲ್ಲಿ ಇಲ್ಲಿದೆ ಡೀಟೈಲ್ಸ್

Krishnaveni K
ಮಂಗಳವಾರ, 8 ಏಪ್ರಿಲ್ 2025 (11:36 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಆರೋಪಿಗಳಾದ, ಗೆಳತಿ ಪವಿತ್ರಾ ಗೌಡರನ್ನು ಇಂದು ನಟ ದರ್ಶನ್ ಮತ್ತೆ ಭೇಟಿ ಮಾಡಲಿದ್ದಾರೆ. ಎಲ್ಲಿ ಇಲ್ಲಿದೆ ಸಂಪೂರ್ಣ ವಿವರ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದರೆ ದರ್ಶನ್ ಎ2 ಆರೋಪಿಯಾಗಿದ್ದಾರೆ. ಪ್ರಕರಣದಲ್ಲಿ ಒಟ್ಟು 17 ಮಂದಿ ಆರೋಪಿಗಳಿದ್ದಾರೆ. ಎಲ್ಲರೂ ಈಗ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಹೊರಬಂದ ಬಳಿಕ ದರ್ಶನ್ ಆದಷ್ಟು ಪವಿತ್ರಾ ಗೌಡರಿಂದ ಅಂತರ ಕಾಯ್ದುಕೊಂಡಿದ್ದರು. ಇತ್ತೀಚೆಗಂತೂ ಎಲ್ಲೇ ಹೋದರೂ ತಮ್ಮ ಪತ್ನಿ ವಿಜಯಲಕ್ಷ್ಮಿ ಜೊತೆಗೇ ಹೋಗುತ್ತಿದ್ದಾರೆ. ಪವಿತ್ರಾ ತಮ್ಮದೇ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಆದರೆ ಎಲ್ಲಾ ಆರೋಪಿಗಳೂ ಪ್ರತೀ ತಿಂಗಳು ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕಾಗುತ್ತದೆ. ಅದರಂತೆ ಇಂದು ಎಲ್ಲಾ ಆರೋಪಿಗಳೂ ಸಿಸಿಎಸ್ ಕೋರ್ಟ್ ಗೆ ಹಾಜರಾಗಲಿದ್ದಾರೆ.

ಈ ಹಿಂದೆ ಎರಡು ಬಾರಿ ಇದೇ ರೀತಿ ನಿಯಮದಂತೆ ದರ್ಶನ್ ಹಾಗೂ ಇತರೆ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಕಳೆದ ಬಾರಿ ಅಂತೂ ದರ್ಶನ್ ಮತ್ತು ಪವಿತ್ರಾ ಮುಖಾಮುಖಿಯಾದರೂ ಮಾತಾಡಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಿಯಲ್ ಲೈಫ್‌ನಲ್ಲಿ ಒಂದಾದ ಕನ್ನಡದ ರೀಲ್ಸ್ ಜೋಡಿ, ಜಿಮ್‌ ಟ್ರೈನರ್ ಕೈಹಿಡಿದ ನಟಿ ರಜಿನಿ

ಜೈಲಿನಲ್ಲಿ ದರ್ಶನ್‌ ಸಂಕಷ್ಟ ನೋಡಲಾಗದೆ ಧನ್ವೀರ್ ಈ ರೀತಿ ಮಾಡಿದ್ರಾ

ಉಗ್ರರಿಗೆ, ವಿಕೃತ ಕಾಮಿಗೆ ಪರಪ್ಪನ ಅಗ್ರಹಾರ ಜೈಲಲ್ಲಿ ವಿಐಪಿ ಟ್ರೀಟ್ಮೆಂಟ್: ದರ್ಶನ್ ಫ್ಯಾನ್ಸ್ ಆಕ್ರೋಶ

ಬಿಗ್‌ಬಾಸ್‌ನಿಂದ ಬಂದ್ಮೇಲೆ ಹೊಸ ಅಧ್ಯಾಯ ಶುರು ಮಾಡಿದ ಉಗ್ರಂ ಮಂಜು

ಸಮಂತಾ ಲವ್‌ನಲ್ಲಿ ಬಿದ್ದಿರುವುದು ಪಕ್ಕಾ ಎಂದ ಅಭಿಮಾನಿಗಳು

ಮುಂದಿನ ಸುದ್ದಿ
Show comments