Webdunia - Bharat's app for daily news and videos

Install App

ನಟ ದರ್ಶನ್ ಗೆ ಇಂದು ಶಸ್ತ್ರಚಿಕಿತ್ಸೆ: ಜೈಲಿಗೆ ಹೋಗದಂತೆ ಇದೇ ಅಸ್ತ್ರವಾಗುತ್ತಾ

Krishnaveni K
ಬುಧವಾರ, 11 ಡಿಸೆಂಬರ್ 2024 (10:30 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಆರೋಪಿ ನಟ ದರ್ಶನ್ ಗೆ ಇಂದು ಬೆನ್ನುಹುರಿಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆ ನಡೆಯಲಿದ್ದು ಇದುವೇ ಅವರಿಗೆ ಮುಂದೆ ಜಾಮೀನು ಸಿಗಲೂ ಪ್ಲಸ್ ಪಾಯಿಂಟ್ ಆಗುವ ಸಾಧ್ಯತೆಯಿದೆ.

ನಟ ದರ್ಶನ್ ಗೆ ತೀವ್ರ ಬೆನ್ನು ನೋವಿರುವ ಕಾರಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲೇ ಇರುವ ದರ್ಶನ್ ಗೆ ಇದುವರೆಗೆ ಶಸ್ತ್ರಚಿಕಿತ್ಸೆಯಾಗಿರಲಿಲ್ಲ. ಇದರ ಬಗ್ಗೆ ನ್ಯಾಯಾಲಯಕ್ಕೆ ಪೊಲೀಸರು ಆಕ್ಷೇಪಣೆಯನ್ನೂ ಸಲ್ಲಿಸಿದ್ದರು. ಆದರೆ ಬಿಪಿ ಹೆಚ್ಚು ಕಡಿಮೆಯಾಗುತ್ತಿದ್ದುದರಿಂದ ಶಸ್ತ್ರಚಿಕಿತ್ಸೆ ನಡೆಸಿಲ್ಲ ಎಂದು ದರ್ಶನ್ ಪರ ವಕೀಲರು ವರದಿ ನೀಡಿದ್ದರು.

ಇದೀಗ ಇಂದು ಶಸ್ತ್ರಚಿಕಿತ್ಸೆ ನಡೆಯಲಿದೆ. ಇದರ ಜೊತೆಗೆ ದರ್ಶನ್ ಮಧ್ಯಂತರ ಜಾಮೀನು ವಿಸ್ತರಣೆಯಾಗಿದೆ. ಇನ್ನೊಂದೆಡೆ ಅವರ ನಾರ್ಮಲ್ ಜಾಮೀನು ಅರ್ಜಿಯ ತೀರ್ಪು ಪ್ರಕಟಣೆಯನ್ನು ಹೈಕೋರ್ಟ್ ಕಾಯ್ದಿರಿಸಿದೆ. ಇಂದು ಶಸ್ತ್ರಚಿಕಿತ್ಸೆಗೊಳಗಾಗಲಿರುವ ದರ್ಶನ್ ಗೆ ಈಗ ಇದುವೇ ವರದಾನವಾಗುವ ಸಾಧ್ಯತೆಯಿದೆ.

ಶಸ್ತ್ರಚಿಕಿತ್ಸೆ ಬಳಿಕ ಕೆಲವು ದಿನ ವಿಶ್ರಾಂತಿ ಅಗತ್ಯವಿರುತ್ತದೆ. ಹೀಗಾಗಿ ಇದೇ ಕಾರಣವನ್ನಿಟ್ಟುಕೊಂಡು ಮತ್ತಷ್ಟು ದಿನಗಳ ಕಾಲ ಜಾಮೀನು ವಿಸ್ತರಣೆಗೆ ಅವಕಾಶ ಕೇಳಬಹುದು. ಇದರ ನಡುವೆ ಮಾಮೂಲಿ ಜಾಮೀನು ಕೂಡಾ ಇದೇ ನೆಪದಲ್ಲಿ ಸಿಕ್ಕರೂ ಅಚ್ಚರಿಯಿಲ್ಲ. ಹೀಗಾಗಿ ದರ್ಶನ್ ಗೆ ಈಗ ಶಸ್ತ್ರಚಿಕಿತ್ಸೆಯೇ ವರದಾನವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments