Webdunia - Bharat's app for daily news and videos

Install App

ದರ್ಶನ್ ಗೆ ಶಸ್ತ್ರಚಿಕಿತ್ಸೆಗೆ ಸೂಚಿಸಿದ ವೈದ್ಯರು: ಇದುವೇ ಅವರಿಗೆ ಪ್ಲಸ್ ಪಾಯಿಂಟ್ ಆಗುತ್ತಾ

Krishnaveni K
ಬುಧವಾರ, 6 ನವೆಂಬರ್ 2024 (15:40 IST)
ಬೆಂಗಳೂರು: ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಸೂಚಿಸಿದ್ದಾರೆ. ಆದರೆ ಇದು ಅವರಿಗೆ ವರದಾನವಾದರೂ ಅಚ್ಚರಿಯಿಲ್ಲ.


ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್ ಗೆ ಬೆನ್ನು ನೋವಿನ ಕಾರಣಕ್ಕೆ ಹೈಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ನೀಡಿದೆ. ಅದರಂತೆ ಅವರು ಈಗ ಬಿಜಿಎಸ್ ಆಸ್ಪತ್ರೆಗೆ ಸೇರಿ ನಾಲ್ಕು ದಿನಗಳಾಗಿವೆ. ವೈದ್ಯರು ತಪಾಸಣೆಗಳನ್ನು ನಡೆಸಿ ಈಗ ಶಸ್ತ್ರಚಿಕಿತ್ಸೆ ನಡೆಸಲೇಬೇಕಾದ ಅನಿವಾರ್ಯತೆಯಿದೆ ಎಂದು ತಿಳಿಸಿದ್ದಾರೆ.

ದರ್ಶನ್ ಗೆ ನಡೆದಾಡಲು ಕಷ್ಟವಾಗುತ್ತಿದೆ. ಕಾಲು ಕೂಡಾ ವೀಕ್ ಆಗಿದೆ. ಈ ಕಾರಣಕ್ಕೆ ಅವರು ಶಸ್ತ್ರಚಿಕಿತ್ಸೆಗೊಳಗಾಗಬೇಕಾಗುತ್ತದೆ. ಬೆನ್ನಿನ ಶಸ್ತ್ರಚಿಕಿತ್ಸೆಗೊಳಗಾದರೆ ಅವರು ಕೆಲವು ದಿನ ವಿಶ್ರಾಂತಿ ಪಡೆಯಬೇಕಾಗುತ್ತದೆ. ಆದರೆ ಕೋರ್ಟ್ ನೀಡಿರುವ ಆರು ವಾರಗಳ ಕಾಲಾವಕಾಶದಲ್ಲಿ ಈಗ ಐದು ವಾರ ಕಳೆದುಹೋಗಿದೆ.

ಒಂದು ವೇಳೆ ಈಗ ಶಸ್ತ್ರಚಿಕಿತ್ಸೆಗೊಳಗಾದರೂ ಜಾಮೀನು ಅವಧಿ ಮುಕ್ತಾಯವಾಗುವ ಹಂತಕ್ಕೆ ಚೇತರಿಸಿಕೊಳ್ಳುವುದು ಅನುಮಾನ. ಹಾಗಿದ್ದಾಗ ಅವರ ಪರ ವಕೀಲರು ಕೋರ್ಟ್ ಮುಂದೆ ಜಾಮೀನು ವಿಸ್ತರಿಸಲು ಮನವಿ ಮಾಡಲು ಉತ್ತಮ ಕಾರಣ ಸಿಕ್ಕಂತಾಗುತ್ತದೆ. ಹೀಗಾಗಿ ಇದು ಅವರ ಪಾಲಿಗೆ ವರದಾನವಾದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟಿಗನ ಜತೆ ಪ್ರೀತಿಯಲ್ಲಿ ಬಿದ್ರಾ ರಶ್ಮಿಕಾ ಮಂದಣ್ಣ, ಇದಕ್ಕೆ ಕಾರಣ ಈ ಫೋಟೋ

ಈಕೆಯಾ ಮಹಾಕುಂಭಮೇಳದ ವೈರಲ್ ಹುಡುಗಿ ಅನ್ನುವಷ್ಟರ ಮಟ್ಟಿಗೆ ಬದಲಾದ ಮೊನಲಿಸಾ, Video

Mysore Sandal Soap: ತಮನ್ನಾ ಭಾಟಿಯಾರನ್ನು ವಜಾಗೊಳಿಸುವಂತೆ ಹೆಚ್ಚಿದ ಒತ್ತಾಯ

Actor Darshan: ಪವಿತ್ರಾ ಗೌಡ ಹೊಸ ಸ್ಟೇಟಸ್ ಹಿಂದಿನ ಟಾರ್ಗೆಟ್ ಯಾರು

Madenur Manu: ಗಂಡನ ಮೇಲೆ ಬಂದಿರುವ ರೇಪ್ ಕೇಸ್ ಬಗ್ಗೆ ಮಡೆನೂರು ಮನು ಪತ್ನಿ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments