ಸ್ಯಾಂಡಲ್ ವುಡ್ ಚಕ್ರವರ್ತಿಯಾಗಿದ್ದ ದರ್ಶನ್ ಗೆ ಲಾಕಪ್ ನಲ್ಲಿ ಕೈಯೇ ದಿಂಬು, ನೆಲವೇ ಹಾಸಿಗೆ

Krishnaveni K
ಬುಧವಾರ, 19 ಜೂನ್ 2024 (10:53 IST)
Photo Credit: Instagram
ಬೆಂಗಳೂರು: ಇಷ್ಟು ದಿನ ಸ್ಯಾಂಡಲ್ ವುಡ್ ಚಕ್ರವರ್ತಿ, ಬಾಕ್ಸ್ ಆಫೀಸ್ ಸುಲ್ತಾನ ಎಂದು ಮೆರೆದಾಡುತ್ತಿದ್ದ ದರ್ಶನ್ ಗೆ ಈಗ ಪೊಲೀಸ್ ಲಾಕಪ್ ನಲ್ಲಿ ಸಾಮಾನ್ಯ ಕೈದಿಗಳಂತೆ ಟ್ರೀಟ್ ಮೆಂಟ್ ಸಿಗುತ್ತಿದೆ.

ದರ್ಶನ್ ಸೆಲೆಬ್ರಿಟಿಯಾಗಿರುವುದರಿಂದ ಅವರಿಗೆ ರಾಜಾತಿಥ್ಯ ಸಿಗಬಹುದು ಎಂದು ಊಹಿಸಲಾಗಿತ್ತು. ಆದರೆ ಯಾವಾಗ ಸ್ವತಃ ಸಿಎಂ ಸಿದ್ದರಾಮಯ್ಯನವರೇ ನಾವು ಯಾವುದೇ ವಿಚಾರಕ್ಕೂ ಹಸ್ತಕ್ಷೇಪ ಮಾಡಲ್ಲ. ಪೊಲೀಸರು ಸ್ವತಂತ್ರವಾಗಿ ತನಿಖೆ ಮಾಡಬಹುದು ಎಂದರೋ, ದರ್ಶನ್ ರನ್ನು ಸಾಮಾನ್ಯ ಕೈದಿಯಂತೆ ಟ್ರೀಟ್ ಮಾಡಲಾಗುತ್ತಿದೆ.

ಪೊಲೀಸ್ ಲಾಕಪ್ ನಲ್ಲಿ ದರ್ಶನ್ ಗೆ ಮಲಗಲು ಹಾಸಿಗೆ, ದಿಂಬು ಅಥವಾ ಕೂರಲು ಕುರ್ಚಿ ಸೇರಿದಂತೆ ಯಾವುದೇ ಸೌಕರ್ಯ ಒದಗಿಸಲಾಗಿಲ್ಲ. ಸಾಮಾನ್ಯ ಕೈದಿಗಳಂತೇ ದರ್ಶನ್ ಕೂಡಾ ಕೈಯನ್ನೇ ದಿಂಬಾಗಿಸಿ, ನೆಲವನ್ನೇ ಹಾಸಿಗೆಯಾಗಿಸಿ ಮಲಗುತ್ತಿದ್ದಾರೆ. ಅವರೊಬ್ಬರನ್ನೇ ಒಂದು ಲಾಕಪ್ ನಲ್ಲಿರಿಸಲಾಗಿದೆ.

ಇನ್ನು ವಿಚಾರಣೆ ಸಂದರ್ಭದಲ್ಲಿ ಇನ್ನೊಂದು ರೂಂಗೆ ಕರೆದುಕಂಡು ಬರಲಾಗುತ್ತದೆ. ಅದರ ಹೊರತಾಗಿ ಅವರು ಲಾಕಪ್ ನಲ್ಲಿ ಸಾಮಾನ್ಯ ಕೈದಿಯಂತೆ ಯಾವದೇ ಸೌಲಭ್ಯಗಳಿಲ್ಲದೇ ಕಾಲ ಕಳೆಯಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

ಮುಂದಿನ ಸುದ್ದಿ
Show comments