Webdunia - Bharat's app for daily news and videos

Install App

ಪತಿ ದರ್ಶನ್ ಮೇಲಿನ ಬೇಸರದಿಂದ ಇನ್ ಸ್ಟಾಗ್ರಾಂನಿಂದಲೇ ಹೊರಬಂದ ವಿಜಯಲಕ್ಷ್ಮಿ

Krishnaveni K
ಗುರುವಾರ, 13 ಜೂನ್ 2024 (14:59 IST)
ಬೆಂಗಳೂರು: ರೇಣುಕಾಸ್ವಾಮಿ ಎಂಬಾತನ ಮೇಲೆ ಹಲ್ಲೆ ನಡೆಸಿ, ಹತ್ಯೆ ನಡೆಸಿದ ಆರೋಪದಲ್ಲಿ ಬಂಧಿತರಾಗಿರುವ ಪತಿ ದರ್ಶನ್ ಮೇಲಿನ ಬೇಸರದಿಂದ ಪತ್ನಿ ವಿಜಯಲಕ್ಷ್ಮಿ ಇಂದು ಇನ್ ಸ್ಟಾಗ್ರಾಂ ಖಾತೆಯನ್ನೇ ಡಿ ಆಕ್ಟಿವೇಟ್ ಮಾಡಿಕೊಂಡಿದ್ದಾರೆ.

ದರ್ಶನ್ ಬಂಧನವಾಗುತ್ತಿದ್ದಂತೇ ವಿಜಯಲಕ್ಷ್ಮಿ ತಮ್ಮ ಇನ್ ಸ್ಟಾಗ್ರಾಂ ಡಿಪಿ ಕಿತ್ತು ಹಾಕಿದ್ದಲ್ಲದೆ, ದರ್ಶನ್ ರನ್ನು ಅನ್ ಫಾಲೋ ಮಾಡಿಕೊಂಡಿದ್ದರು. ಇದು ನಿನ್ನೆ ಭಾರೀ ಸುದ್ದಿಯಾಗಿತ್ತು. ಈ ಮೂಲಕ ಪತಿ ಮೇಲಿನ ಆಕ್ರೋಶ ಹೊರಹಾಕಿಕೊಂಡಿದ್ದಾರೆ. ಆದರೆ ಇಂದು ಇನ್ನೂ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ.

ಇನ್ ಸ್ಟಾಗ್ರಾಂನಲ್ಲಿ ವಿಜಿ ದರ್ಶನ್ ಎಂಬ ಹೆಸರಿನಲ್ಲಿ ವಿಜಯಲಕ್ಷ್ಮಿ ಖಾತೆ ಹೊಂದಿದ್ದರು. ಅವರಿಗೆ ಸಾಕಷ್ಟು ಫಾಲೋವರ್ ಗಳೂ ಇದ್ದರು. ತಮ್ಮ, ಮಗನ ಫೋಟೋ ಪ್ರಕಟಿಸುವ ಮೂಲಕ ಇನ್ ಸ್ಟಾಗ್ರಾಂನಲ್ಲಿ ಆಕ್ಟಿವ್ ಆಗಿದ್ದರು. ಆದರೆ ದರ್ಶನ್ ಹತ್ಯೆ ಪ್ರಕರಣದಲ್ಲಿ ಸಿಲುಕಿಕೊಂಡ ಬಳಿಕ ಅನೇಕರು ಇನ್ ಸ್ಟಾದಲ್ಲಿ ಅವರಿಗೆ ಕಾಮೆಂಟ್ ಮಾಡುತ್ತಲೇ ಇದ್ದರು.

ನೀವು ದರ್ಶನ್ ಜೊತೆ ಸಂಬಂಧವನ್ನೇ ಕಡಿದುಕೊಳ್ಳಿ. ಅವರಿಂದ ದೂರವಾಗಿ. ಸಹಿಸಿಕೊಳ್ಳುವುದಕ್ಕೂ ಒಂದು ಮಿತಿಯಿದೆ ಎಂದೆಲ್ಲಾ ನೆಟ್ಟಿಗರು ಅವರ ಹಳೆಯ ಪೋಸ್ಟ್ ಗಳಲ್ಲೆಲ್ಲಾ ಕಾಮೆಂಟ್ ಮಾಡುತ್ತಿದ್ದರು. ಆದರೆ ಇಂದು ಬಹುಶಃ ಈ ಎಲ್ಲಾ ಬೆಳವಣಿಗೆಗಳಿಂದ ಬೇಸತ್ತು ಇನ್ ಸ್ಟಾಗ್ರಾಂನಿಂದಲೇ ಹೊರಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments