Webdunia - Bharat's app for daily news and videos

Install App

ಪತ್ನಿ ವಿಜಯಲಕ್ಷ್ಮಿ ಪ್ರಾಮಾಣಿಕತೆಗಾದರೂ ಬೆಲೆ ಬೇಡ್ವಾ: ಮುಜುಗರಕ್ಕೀಡಾದ ದರ್ಶನ್ ಪತ್ನಿ ಮಾಡಿದ್ದೇನು ನೋಡಿ

Krishnaveni K
ಸೋಮವಾರ, 26 ಆಗಸ್ಟ್ 2024 (14:32 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಪಶ್ಚಾತ್ತಾಪ ಪಡುತ್ತಿದ್ದಾರೆ, ಪವಿತ್ರಾ ಸಹವಾಸ ಬಿಟ್ಟಿದ್ದಾರೆ, ತೀರಾ ಕುಗ್ಗಿಹೋಗಿದ್ದಾರೆ ಎಂದೆಲ್ಲಾ ಆಪ್ತರು ನೀಡುತ್ತಿದ್ದ ಹೇಳಿಕೆಗಳೆಲ್ಲಾಸುಳ್ಳು ಎಂದು ಈಗ ಬಯಲಾಗಿದೆ.

ದರ್ಶನ್ ಜೈಲಿನಲ್ಲಿ ವಿಐಪಿ ಆತಿಥ್ಯ ಸ್ವೀಕರಿಸುತ್ತಿರುವ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದೆ. ಇದೀಗ ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ದರ್ಶನ್ ರನ್ನು ಬೇರೆ ಜೈಲಿಗೆ ಸ್ಥಳಾಂತರಿಸಲು ಸಿಎಂ ಆದೇಶ ನೀಡಿದ್ದಾರೆ.

ದರ್ಶನ್ ತಮ್ಮ ಪರಿಚಿತರೊಂದಿಗೆ ವಿಡಿಯೋ ಕಾಲ್ ಮಾಡಿರುವುದು, ಮೆತ್ತನೆಯ ಬೆಡ್ ನಲ್ಲಿ ಕೂತಿರುವುದು, ಸಿಗರೇಟು ಕಾಫಿ ಕಪ್ ಹಿಡಿದುಕೊಂಡು ಲಾನ್ ನಲ್ಲಿ ಕುಳಿತಿರುವ ಫೋಟೋ, ವಿಡಿಯೋಗಳು ವೈರಲ್ ಆಗಿರಿವುದು ಪತ್ನಿ ವಿಜಯಲಕ್ಷ್ಮಿ ಮುಜುಗರಕ್ಕೀಡಾಗುವಂತೆ ಮಾಡಿದೆ.

ಪ್ರತೀ ಸೋಮವಾರಗಳಂದು ಪತಿ ಭೇಟಿಗೆ ಬರುವ ವಿಜಯಲಕ್ಷ್ಮಿ ಇಂದು ಬಂದೇ ಇಲ್ಲ. ಜೈಲಿನ ಹೊರಗೇ ಮಾಧ್ಯಮಗಳು ಕಾಯುತ್ತಿರುವುದರಿಂದ ವಿಜಯಲಕ್ಷ್ಮಿ ಇಂದು ಜೈಲ್ ಗೆ ಭೇಟಿ ನೀಡಿಲ್ಲ. ಪತಿಯ ಬಿಡುಗಡೆಗಾಗಿ, ಒಳಿತಿಗಾಗಿ ವಿಜಯಲಕ್ಷ್ಮಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದರೆ ಇತ್ತ ದರ್ಶನ್ ತಪ್ಪಿನ ಬಗ್ಗೆ ಕೊಂಚವೂ ಪಶ್ಚಾತ್ತಾಪವಿಲ್ಲದವರಂತೆ ಜೈಲಿನ ಕುಳಿತು ಮೋಜು-ಮಸ್ತಿ ಮಾಡುತ್ತಿರುವುದು ಸರಿಯೇ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ಮುಂದಿನ ಸುದ್ದಿ