Webdunia - Bharat's app for daily news and videos

Install App

ದರ್ಶನ್ ಗೆ ಇಂದು ಜಾಮೀನು ಸಿಕ್ಕರೆ ನೇರವಾಗಿ ಅವರು ಹೋಗುವ ಸ್ಥಳ ಇಲ್ಲಿಗೆ

Krishnaveni K
ಬುಧವಾರ, 30 ಅಕ್ಟೋಬರ್ 2024 (08:47 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆ ಇಂದು ಆರೋಗ್ಯದ ದೃಷ್ಟಿಯಿಂದ ಮಧ್ಯಂತರ ಜಾಮೀನು ಸಿಗುವ ನಿರೀಕ್ಷೆಯಿದೆ. ಜಾಮೀನು ಸಿಕ್ಕರೆ ತಕ್ಷಣವೇ ಅವರು ಎಲ್ಲಿಗೆ ಹೋಗುತ್ತಾರೆ ಎಂಬುದು ಗೊತ್ತಾಗಿದೆ.

ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರ ಆರೋಗ್ಯದ ಸ್ಥಿತಿ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ನ್ಯಾಯಾಧೀಶರು ಅವರಿಗೆ ಎಲ್ಲಿ ಚಿಕಿತ್ಸೆ ನೀಡುತ್ತೀರಿ ಎಂದು ವಿವರಣೆ ಕೇಳಿದ್ದಾರೆ. ಇದಕ್ಕೆ ದರ್ಶನ್ ಪರ ವಕೀಲರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವುದಾಗಿ ಹೇಳಿದ್ದಾರೆ.

ಹೀಗಾಗಿ ಷರತ್ತಿನ ಮೇಲೆ ಮೈಸೂರಿನಲ್ಲಿ ಚಿಕಿತ್ಸೆ ಪಡೆಯುವಷ್ಟು ದಿನ ಮಾತ್ರ ಜಾಮೀನು ಸಿಗುವ ಸಾಧ್ಯತೆಯಿದೆ. ಇದರಿಂದಾಗಿ ಜಾಮೀನು ಸಿಕ್ಕ ತಕ್ಷಣ ದರ್ಶನ್ ನೇರವಾಗಿ ಮೈಸೂರಿಗೆ ಹೋಗಬಹುದು. ಆದರೆ ಅವರಿಗೆ ಬೆಂಗಳೂರಿಗೆ ತೆರಳಲು ನಿರ್ಬಂಧ ಹೇರುವ ಸಾಧ್ಯತೆಯಿದೆ.

ಚಿಕಿತ್ಸೆಗಾಗಿ ಅಷ್ಟೇ ಜಾಮೀನು ಸಿಕ್ಕರೆ ಅವರ ಗುಣಮುಖರಾದ ಬಳಿಕ ಮತ್ತೆ ಕೋರ್ಟ್ ಗೆ ಶರಣಾಗಬೇಕಾಗುತ್ತದೆ. ಅದಾದ ಬಳಿಕ ಅವರು ಬೆಂಗಳೂರಿನ ಜೈಲಿಗೆ ಶಿಫ್ಟ್ ಆಗಲು ಮನವಿ ಮಾಡುವ ಸಾಧ್ಯತೆಯಿದೆ. ಅಥವಾ ಆರೋಗ್ಯದ ನೆಪದಲ್ಲಿ ಮತ್ತಷ್ಟು ದಿನ ಜಾಮೀನು ವಿಸ್ತರಿಸುವ ಸಾಧ್ಯತೆಯೂ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

Madenur Manu: ಸಂತ್ರಸ್ತ ನಟಿಯ ಮನೆಗೇ ಮಡೆನೂರು ಮನುವನ್ನು ಕರೆದುಕೊಂಡು ಬಂದ ಪೊಲೀಸರು

Actor Mukul Dev: ನಟನ ಸಾವಿಗೆ ಇದೇ ಕಾರಣ ಎಂದ ಆಪ್ತ ಸ್ನೇಹಿತ

Abhishek Ramdas: ಸದ್ಯಕ್ಕೆ ಸೀರಿಯಲ್ ಬೇಡ ಎಂದಿದ್ದ ನಟ ಅಭಿಷೇಕ್ ನಂದಗೋಕುಲ ಒಪ್ಪಿಕೊಂಡಿದ್ದಕ್ಕೆ ಕಾರಣವೇನು

ಮುಂದಿನ ಸುದ್ದಿ
Show comments