Webdunia - Bharat's app for daily news and videos

Install App

ಆ 3 ಸೆಕೆಂಡ್‌ನ ವಿಡಿಯೋ ಸಿಕ್ಕರೆ ದರ್ಶನ್‌ ಮುಂದಿನ ಕತೆಯೇನು

Sampriya
ಶನಿವಾರ, 20 ಜುಲೈ 2024 (16:25 IST)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸ್ ಇಲಾಖೆ ತನಿಖೆಯನ್ನು ಚುರುಕು ಮಾಡಿಕೊಂಡಿದೆ. ಇನ್ನೂ ತನಿಖೆಯನ್ನು ಬಗೆದಷ್ಟು ಹಲವು ವಿಚಾರಗಳು ಹೊರಬರುತ್ತಿದ್ದು, ಇದೀಗ ಭಯಾನಕ ವಿಚಾರವೊಂದು ತನಿಖೆಯಲ್ಲಿ ಹೊರ ಬಿದ್ದಿದೆ.

ರೇಣುಕಾಸ್ವಾಮಿಗೆ ದರ್ಶನ್ ಅವರು ಥಳಿಸುತ್ತಿರುವ ಕೆಲ ಸೆಕೆಂಡ್‌ನ ವಿಡಿಯೋವನ್ನು ಅಲ್ಲೇ ಇದ್ದ ಆರೋಪಿಯೊಬ್ಬ ತಮ್ಮ ಐಫೋನ್‌ನಲ್ಲಿ ಸೆರೆಹಿಡಿದಿರುವ ವಿಚಾರ ಬೆಳಕಿಗೆ ಬಂದಿದೆ.

ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ, ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಈಗಾಗಕೇ 200ಕ್ಕೂ ಅಧಿಕ ಸಾಕ್ಷ್ಯಗಳನ್ನು ಪಡೆದುಕೊಂಡಿದ್ದಾರೆ. ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ರೇಣುಕಾಸ್ವಾಮಿಗೆ ದರ್ಶನ್ ಅವರು ಹೊಡೆಯುವ ವಿಡಿಯೋವನ್ನು ರೆಕಾರ್ಡ್ ಮಾಡಲಾಗಿದೆ. ನಂತರ ಆ ವಿಡಿಯೋವನ್ನು ಡಿಲೀಟ್ ಮಾಡಿದ್ದಾರೆಂದು ತಿಳಿದು ಬಂದಿದೆ.

ಪ್ರಕರಣದ ಮತ್ತೋರ್ವ ಆರೋಪಿಯಾಗಿರುವ ಪ್ರದೂಷ್ ಎಂಬಾಂತ ವಿಡಿಯೋ ಸೆರೆ ಮಾಡಿರುವುದಾಗಿ ಗೊತ್ತಾಗಿದೆ. ನಂತರ ಆ ವಿಡಿಯೋ ಡಿಲೀಟ್ ಮಾಡಿರುವುದಾಗಿ ಪ್ರದೂಷ್ ಒಪ್ಪಿಕೊಂಡಿರುವುದಾಗಿ ವಿಚಾರಣೆಯಲ್ಲಿ ತಿಳಿದುಬಂದಿದೆ.

ಇನ್ನೂ ರೇಣುಕಾಸ್ವಾಮಿಗೆ ಹೊಡೆಯುತ್ತಿರುವ ವಿಡಿಯೋವನ್ನು ಸ್ವತಃ ದರ್ಶನ್ ಅವರೇ ವಿಡಿಯೋ ಮಾಡಲು ಹೇಳಿರುವುದಾಗಿ ಆರೋಪಿ ಹೇಳಿಕೊಂಡಿದ್ದಾನೆ.  ದರ್ಶನ್ ಹೇಳಿದಂತೆ ಪ್ರದೂಷ್ ತಮ್ಮ ಐಫೋನ್‌ನಲ್ಲಿ ಮೂರು ಸೆಕೆಂಡ್ ದೃಶ್ಯ ರೆಕಾರ್ಡ್‌ ಮಾಡಿ ಬಳಿಕ ಸ್ಟಾಪ್ ಮಾಡಿ ನಂತರ ಅದನ್ನು ಡಿಲೀಟ್ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments