Webdunia - Bharat's app for daily news and videos

Install App

ದರ್ಶನ್-ಯಶ್ ಫ್ಯಾನ್ಸ್ ಕಿತ್ತಾಟದ ಬಳಿಕ ಪವನ್ ಒಡೆಯರ್ ಟ್ವೀಟ್

Webdunia
ಗುರುವಾರ, 28 ಮೇ 2020 (09:44 IST)
ಬೆಂಗಳೂರು: ನಿರ್ದೇಶಕ ಪವನ್ ಒಡೆಯರ್ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಟ್ವೀಟ್ ಮಾಡುವಾಗ ಯಾವ ಗಳಿಗೆಯಲ್ಲಿ ‘ಬಾಸ್’ ಎಂದು ಕರೆದರೋ ಆವಾಗಿನಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಯಶ್ ಅಭಿಮಾನಿಗಳ ನಡುವೆ ಸ್ಯಾಂಡಲ್ ವುಡ್ ಬಾಸ್ ಯಾರು ಎನ್ನುವ ವಿಚಾರಕ್ಕೆ ಕಿತ್ತಾಟ ಶುರುವಾಯಿತು.


ಇದು ಯಾವ ಮಟ್ಟಿಗೆ ಹೋಗಿದೆಯೆಂದರೆ ಸೋಷಿಯಲ್ ಮೀಡಿಯಾದಲ್ಲಿ ಇಬ್ಬರೂ ಸ್ಟಾರ್ ನಟರ ಅಭಿಮಾನಿಗಳು ಇನ್ನೊಬ್ಬ ಸ್ಟಾರ್ ನಟನ ಬಗ್ಗೆ ಆಕ್ಷೇಪಾರ್ಹವಾಗಿ ಟ್ವೀಟ್, ಮೆಮೆಗಳ ಮೂಲಕ ತಮಾಷೆ ಮಾಡುವ ಹಂತಕ್ಕೆ ಬಂದಿದೆ.

ಇಷ್ಟೆಲ್ಲಾ ರದ್ದಾಂತವಾದ ಬಳಿಕ ಈಗ ಪವನ್ ಒಡೆಯರ್ ಟ್ವೀಟ್ ಒಂದನ್ನು ಮಾಡಿದ್ದು, ಅದರಲ್ಲಿ ದರ್ಶನ್ ಬಗ್ಗೆ ಹೊಗಳಿ ಬರೆದಿದ್ದಾರೆ. ಮೊನ್ನೆ ಯಶ್ ಜತೆಗೆ ಪ್ರಕಟಿಸಿದ್ದಂತೇ ಫೋಟೋವನ್ನು ಪ್ರಕಟಿಸಿದ ಪವನ್ ‘ಎಂತಹ ಸಂಕಷ್ಟ ಬಂದರೂ ಅದನ್ನು ಎದುರಿಸಿ, ಮೆಟ್ಟಿ ನಿಲ್ಲುವುದನ್ನು ಕಲಿಸಿರುವುದೇ ದರ್ಶನ್ ಸರ್ ಅವರ ವ್ಯಕ್ತಿತ್ವ. ಮಾತೃ ಮಮತೆ, ಸದಾ ಎಲ್ಲರಿಗೂ ಒಳ್ಳೆಯದಾಗಲಿ ಅನ್ನುವ ಅವರ ಗುಣ ಅದ್ಭುತ, ಜಗನ್ಮಾತೆ ಚಾಮುಂಡೇಶ್ವರಿಯ ಪುತ್ರ ದರ್ಶನ್ ಸರ್. ಬದಲಾಗು ನೀನು ಬದಲಾಯಿಸು ನೀನು ದೃಶ್ಯ ರೂಪಕಕ್ಕೆ ನಿಮ್ಮ ಸಮಯ ನೀಡಿದ್ದಕ್ಕೆ ಥ್ಯಾಂಕ್ಸ್ ಸರ್’ ಎಂದು ಬರೆದಿದ್ದಾರೆ.

ಈ ಮೂಲಕ ದರ್ಶನ್ ಅವರನ್ನು ಹೊಗಳಿ ಬರೆದು ಅಭಿಮಾನಿಗಳ ಆಕ್ರೋಶ ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಇಷ್ಟಕ್ಕೇ ಸುಮ್ಮನಾಗದ ಕೆಲವರು ಮೊನ್ನೆ ಯಶ್ ರನ್ನು ಬಾಸ್ ಅಂದಿರಿ, ಈವತ್ತು ದರ್ಶನ್ ರನ್ನು ಹೊಗಳುತ್ತೀರಿ. ನೀವು ಯಾವ ಕಡೆ ಎಂದು ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಮುಂದಿನ ಸುದ್ದಿ
Show comments