Webdunia - Bharat's app for daily news and videos

Install App

ದರ್ಶನ್ ಗೆ ಹೆಗಲು ಕೊಟ್ಟು ಆಸ್ಪತ್ರೆಯಿಂದ ಹೊರಗೆ ಕರೆತಂದ ಮಗ ವಿನೀಶ್

Krishnaveni K
ಬುಧವಾರ, 18 ಡಿಸೆಂಬರ್ 2024 (12:47 IST)
ಬೆಂಗಳೂರು: ಬೆನ್ನು ನೋವಿಗೆಂದು ಆಸ್ಪತ್ರೆಗೆ ದಾಖಲಾಗಿದ್ದ ರೇಣುಕಾಸ್ವಾಮಿ ಮರ್ಡರ್ ಕೇಸ್ ಆರೋಪಿ, ನಟ ದರ್ಶನ್ ಇಂದು ಸರ್ಜರಿಯಿಲ್ಲದೇ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ ಒಂದು ತಿಂಗಳಿನಿಂದ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿದ್ದರು. ಇಂದು ಅವರು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಸರ್ಜರಿಗೆಂದೇ ಅವರಿಗೆ ಮಧ್ಯಂತರ ಜಾಮೀನು ಮಂಜೂರಾಗಿತ್ತು. ಆದರೆ ಇದುವರೆಗೆ ಸರ್ಜರಿ ಮಾಡಿಸಿಕೊಂಡಿರಲಿಲ್ಲ. ಇದೀಗ ರೆಗ್ಯುಲರ್ ಜಾಮೀನು ಮಂಜೂರಾಗುತ್ತಿದ್ದಂತೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕುಂಟುತ್ತಲೇ ಇಂದು ಆಸ್ಪತ್ರೆಯಿಂದ ಹೊರ ಬಂದ ದರ್ಶನ್ ಗೆ ಮಗ ವಿನೀಶ್ ಹೆಗಲು ಕೊಟ್ಟಿದ್ದಾರೆ. ವಿನೀಶ್ ರನ್ನು ಹಿಡಿದುಕೊಂಡು ಕುಂಟುತ್ತಲೇ ದರ್ಶನ್ ಆಸ್ಪತ್ರೆಯಿಂದ ಹೊರಬಂದು ಕಾರು ಏರಿ ಮನೆಗೆ ಮರಳಿದ್ದಾರೆ.

ದರ್ಶನ್ ರನ್ನು ಡಿಸ್ಚಾರ್ಜ್ ಮಾಡಿಸುವ ಸಲುವಾಗಿ ಇಂದು ಅವರ ಮಗ ವಿನೀಶ್, ಅಳಿಯ, ಸ್ನೇಹಿತ ಧನ್ವೀರ್ ಗೌಡ ಕೂಡಾ ಆಗಮಿಸಿದ್ದರು. ಆಸ್ಪತ್ರೆಯಿಂದ ನೇರವಾಗಿ ದರ್ಶನ್ ಹೊಸಕೆರೆಹಳ್ಳಿಯಲ್ಲಿರುವ ಅಪಾರ್ಟ್ ಮೆಂಟ್ ಗೆ ತೆರಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments