Select Your Language

Notifications

webdunia
webdunia
webdunia
webdunia

ದುನಿಯಾ ವಿಜಯ್ ಗೆ ಡಿಸಿಪಿ ಅಣ್ಣಾಮಲೈ ಮಾಡಿದ ಖಡಕ್ ವಾರ್ನಿಂಗ್ ಏನು?

ದುನಿಯಾ ವಿಜಯ್ ಗೆ ಡಿಸಿಪಿ ಅಣ್ಣಾಮಲೈ  ಮಾಡಿದ ಖಡಕ್ ವಾರ್ನಿಂಗ್ ಏನು?
ಬೆಂಗಳೂರು , ಬುಧವಾರ, 7 ನವೆಂಬರ್ 2018 (14:52 IST)
ಬೆಂಗಳೂರು : ಕೌಟುಂಬಿಕ ಕಲಹ  ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾದ  ನಟ ದುನಿಯಾ ವಿಜಯ್ ಅವರಿಗೆ ದಕ್ಷಿಣ ವಿಭಾಗ ಡಿಸಿಪಿ ಅಣ್ಣಾಮಲೈ ಖಡಕ್ ವಾರ್ನಿಂಗ್ ಮಾಡಿದ್ದಾರೆ.


ದುನಿಯಾ ವಿಜಯ್ ಕುಟುಂಬದವರು ಪದೇಪದೇ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವುದಲ್ಲದೇ ಸಮಾಜದ ಶಾಂತಿ ಕದಡುತ್ತಿದ್ದಾರೆ ಎಂದು  ವಿಜಯ್ ಹಾಗೂ ಪತ್ನಿ ನಾಗರತ್ನ, ಕೀರ್ತಿಗೌಡ ಸೇರಿದಂತೆ ಏಳುಮಂದಿಗೆ 107 ಸೆಕ್ಷನ್ ಹಾಕಲಾಗಿತ್ತು. ಈ ಕುರಿತು ಡಿಸಿಪಿ ಅಣ್ಣಾಮಲೈ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೂಡ ನೀಡಲಾಗಿತ್ತು.


ಇದೀಗ ವಿಚಾರಣೆಗೆ ಹಾಜರಾದ ವಿಜಯ್ ಅವರನ್ನು ವಿಚಾರಣೆ ನಡೆಸಿದ ಅಣ್ಣಾಮಲೈ ಇದು ಬೆಂಗಳೂರು ಅಥವಾ ಸಾರ್ವಜನಿಕ ಸಮಸ್ಯೆ ಅಲ್ಲ. ಹೀಗಾಗಿ ದುನಿಯಾ ವಿಜಯ್ ವಿಷಯವಾಗಿ ನಾನು ಮಾತನಾಡುವುದಿಲ್ಲ. ದುನಿಯಾ ವಿಜಿಯಿಂದ 5 ಲಕ್ಷ ಶ್ಯೂರಿಟಿಯನ್ನ ಬರೆಸಿಕೊಂಡಿದ್ದೀನಿ. ಮುಚ್ಚಳಿಕೆಯಲ್ಲಿ ಬರೆದುಕೊಟ್ಟಿದ್ದಾರೆ. ಅವರ ಅಪ್ಪ ಅಮ್ಮನಿಗೆ ವಯಸ್ಸಾಗಿದೆ.


ಹೀಗಾಗಿ ಜಸ್ಟ್ ವಾರ್ನಿಂಗ್ ಮಾಡಿದ್ದೇನೆ. ಇನ್ನೊಂದು ಬಾರಿ ಶಾಂತಿ ಕದಡುವಂತ ಕೆಲಸ ಮಾಡಿದರೆ ಕಾನೂನು ಕ್ರಮ ಜರುಗಿಸುತ್ತೇನೆ ಎಂದು ವಿಜಯ್ ಗೆ ಅಣ್ಣಾಮಲೈ ಖಡಕ್ ವಾರ್ನಿಂಗ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕೇದಾರ್​ನಾಥ್ ಚಿತ್ರಕ್ಕೆ ಎದುರಾಗಿದೆ ಸಂಕಷ್ಟ