Webdunia - Bharat's app for daily news and videos

Install App

ದುನಿಯಾ ವಿಜಯ್ ಗೆ ಡಿಸಿಪಿ ಅಣ್ಣಾಮಲೈ ಮಾಡಿದ ಖಡಕ್ ವಾರ್ನಿಂಗ್ ಏನು?

Webdunia
ಬುಧವಾರ, 7 ನವೆಂಬರ್ 2018 (14:52 IST)
ಬೆಂಗಳೂರು : ಕೌಟುಂಬಿಕ ಕಲಹ  ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾದ  ನಟ ದುನಿಯಾ ವಿಜಯ್ ಅವರಿಗೆ ದಕ್ಷಿಣ ವಿಭಾಗ ಡಿಸಿಪಿ ಅಣ್ಣಾಮಲೈ ಖಡಕ್ ವಾರ್ನಿಂಗ್ ಮಾಡಿದ್ದಾರೆ.


ದುನಿಯಾ ವಿಜಯ್ ಕುಟುಂಬದವರು ಪದೇಪದೇ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವುದಲ್ಲದೇ ಸಮಾಜದ ಶಾಂತಿ ಕದಡುತ್ತಿದ್ದಾರೆ ಎಂದು  ವಿಜಯ್ ಹಾಗೂ ಪತ್ನಿ ನಾಗರತ್ನ, ಕೀರ್ತಿಗೌಡ ಸೇರಿದಂತೆ ಏಳುಮಂದಿಗೆ 107 ಸೆಕ್ಷನ್ ಹಾಕಲಾಗಿತ್ತು. ಈ ಕುರಿತು ಡಿಸಿಪಿ ಅಣ್ಣಾಮಲೈ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೂಡ ನೀಡಲಾಗಿತ್ತು.


ಇದೀಗ ವಿಚಾರಣೆಗೆ ಹಾಜರಾದ ವಿಜಯ್ ಅವರನ್ನು ವಿಚಾರಣೆ ನಡೆಸಿದ ಅಣ್ಣಾಮಲೈ ಇದು ಬೆಂಗಳೂರು ಅಥವಾ ಸಾರ್ವಜನಿಕ ಸಮಸ್ಯೆ ಅಲ್ಲ. ಹೀಗಾಗಿ ದುನಿಯಾ ವಿಜಯ್ ವಿಷಯವಾಗಿ ನಾನು ಮಾತನಾಡುವುದಿಲ್ಲ. ದುನಿಯಾ ವಿಜಿಯಿಂದ 5 ಲಕ್ಷ ಶ್ಯೂರಿಟಿಯನ್ನ ಬರೆಸಿಕೊಂಡಿದ್ದೀನಿ. ಮುಚ್ಚಳಿಕೆಯಲ್ಲಿ ಬರೆದುಕೊಟ್ಟಿದ್ದಾರೆ. ಅವರ ಅಪ್ಪ ಅಮ್ಮನಿಗೆ ವಯಸ್ಸಾಗಿದೆ.


ಹೀಗಾಗಿ ಜಸ್ಟ್ ವಾರ್ನಿಂಗ್ ಮಾಡಿದ್ದೇನೆ. ಇನ್ನೊಂದು ಬಾರಿ ಶಾಂತಿ ಕದಡುವಂತ ಕೆಲಸ ಮಾಡಿದರೆ ಕಾನೂನು ಕ್ರಮ ಜರುಗಿಸುತ್ತೇನೆ ಎಂದು ವಿಜಯ್ ಗೆ ಅಣ್ಣಾಮಲೈ ಖಡಕ್ ವಾರ್ನಿಂಗ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments