Webdunia - Bharat's app for daily news and videos

Install App

ಶೃತಿ ಹರಿಹರನ್ ಬೆಂಬಲಿಸಿದ ನಟ ಚೇತನ್ ಗೆ ದೂರವಾಣಿಯಲ್ಲೇ ಬೆವರಿಳಿಸಿದ ಧ್ರುವ ಸರ್ಜಾರಿಂದ ಈಗ ಮತ್ತೊಂದು ನಿರ್ಧಾರ!

Webdunia
ಬುಧವಾರ, 24 ಅಕ್ಟೋಬರ್ 2018 (09:22 IST)
ಬೆಂಗಳೂರು: ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್ ಗೆ ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ದೂರವಾಣಿಯಲ್ಲೇ ಧಮ್ಕಿ ಹಾಕಿದ ನಟ ಧ್ರುವ ಸರ್ಜಾ ಇದೀಗ ಪತ್ರಿಕಾಗೋಷ್ಠಿ ನಡೆಸಲಿದ್ದಾರಂತೆ.

ಮಾವ ಅರ್ಜುನ್ ಸರ್ಜಾ ಪರ ನಿಂತಿರುವ ಧ್ರುವ ಸರ್ಜಾ ಶೃತಿ ಹರಿಹರನ್ ವಿರುದ್ಧ ಕಿಡಿ ಕಾರಿದ್ದಲ್ಲದೆ, ಅವರನ್ನು ಬೆಂಬಲಿಸುತ್ತಿರುವ ಚೇತನ್ ವಿರುದ್ಧವೂ ಗುಡುಗಿದ್ದಾರೆ. ಸತ್ಯ ತಿಳಿದುಕೊಳ್ಳದೇ ನಿನ್ನ ಲಾಭಕ್ಕೆ ಏನೇನೋ ಹೇಳಬೇಡ ಎಂದು ಚೇತನ್ ವಿರುದ್ಧ ಕಿಡಿ ಕಾರಿದ್ದಾರೆ.

ಅಷ್ಟೇ ಅಲ್ಲದೆ, ಈ ವಿಚಾರವಾಗಿ ಸದ್ಯದಲ್ಲೇ ಪತ್ರಿಕಾಗೋಷ್ಠಿ ಕರೆದು ನಾವು ಮನೆಯವರೆಲ್ಲಾ ಕೂತು ಇದರ ಬಗ್ಗೆ ವಿವರ ನೀಡುತ್ತೇವೆ ಎಂದು ಧ್ರುವ ಸರ್ಜಾ ಹೇಳಿಕೊಂಡಿದ್ದಾರೆ.

ಇನ್ನೊಂದೆಡೆ ಗಂಡ ಹೆಂಡತಿ ಖ್ಯಾತಿಯ ನಟಿ ಸಂಜನಾ ಆ ಚಿತ್ರದ ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀ ಟೂ ಅಭಿಯಾನದಲ್ಲಿ ಹೊರಿಸಿದ್ದ ಲೈಂಗಿಕ ಕಿರುಕುಳ ಆರೋಪಕ್ಕೆ ಇಂದು ರವಿ ಶ್ರೀವತ್ಸ ಉತ್ತರಿಸುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ