Webdunia - Bharat's app for daily news and videos

Install App

ರಾಮಮಂದಿರ ಪ್ರಾಣ ಪ್ರತಿಷ್ಠೆ ದಿನವೇ ಧ್ರುವ ಸರ್ಜಾ ಮಕ್ಕಳಿಗೆ ನಾಮಕರಣ

Krishnaveni K
ಸೋಮವಾರ, 22 ಜನವರಿ 2024 (09:32 IST)
ಬೆಂಗಳೂರು: ಅಯೋಧ್ಯೆಯಲ್ಲಿ ಇಂದು ರಾಮಜನ್ಮಭೂಮಿಯಲ್ಲಿ ರಾಮಮಂದಿರ ಲೋಕಾರ್ಪಣೆಯಾಗುತ್ತಿದೆ. ಈ ಶುಭ ಗಳಿಗೆಯೇ ಧ್ರುವ ಸರ್ಜಾ ತಮ್ಮ ಮಕ್ಕಳಿಗೆ ನಾಮಕರಣ ಮಾಡಲಿದ್ದಾರೆ.

ರಾಮ ಮಂದಿರ ಪ್ರಾಣ ಪ್ರತಿಷ್ಠೆಯ ಸುಸಂದರ್ಭದಲ್ಲಿ ಎಷ್ಟೋ ಜನ ಅನೇಕ ಒಳ್ಳೆಯ ಕೆಲಸ ಮಾಡಲು ಮುಂದಾಗುತ್ತಿದ್ದಾರೆ. ಅನೇಕರಿಗೆ ಇದುವೇ ಶುಭ ಮುಹೂರ್ತವಾಗುತ್ತಿದೆ.

ಇದೇ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ತಮ್ಮ ಇಬ್ಬರು ಮಕ್ಕಳಿಗೂ ನಾಮಕರಣ ಮಾಡಲು ನಿರ್ಧರಿಸಿದ್ದಾರೆ. ಇಂದಿನ ಶುಭ ಮುಹೂರ್ತದಲ್ಲಿ ಧ್ರುವ ತಮ್ಮ ಹಿರಿಯ ಪುತ್ರಿ ಮತ್ತು ಪುತ್ರನಿಗೆ ನಾಮಕರಣ ಮಾಡಲಿದ್ದಾರೆ.

2022 ರಲ್ಲಿ ಧ್ರುವ ದಂಪತಿಗೆ ಮೊದಲ ಮಗಳ ಜನನವಾಗಿತ್ತು. 2023 ರಲ್ಲಿ ಗಂಡು ಮಗುವಿನ ಜನನವಾಗಿತ್ತು. ಆದರೆ ಈ ಇಬ್ಬರೂ ಮಕ್ಕಳಿಗೂ ಇದುವರೆಗೆ ನಾಮಕರಣ ಮಾಡಿರಲಿಲ್ಲ. ಇದೀಗ ನಾಮಕರಣ ಶಾಸ್ತ್ರ ನೆರವೇರಿಸಲಾಗುತ್ತಿದೆ. ಅದೂ ಈ ದಿನ ರಾಮನ ದಿನವಾಗಿರುವುದರಿಂದ ಮಕ್ಕಳಿಗೆ ರಾಮಾಯಣ, ಮಹಾಭಾರತದ ಹಿನ್ನಲೆಯಿರುವ ಹೆಸರನ್ನೇ ಇಡಲಾಗುತ್ತಿದೆ. ಜೊತೆಗೆ ಧ್ರುವ ಮೆಚ್ಚಿನ ಅಣ್ಣ ಚಿರಂಜೀವಿ ಸರ್ಜಾ ಸಮಾಧಿ ಇರುವ ಫಾರ್ಮ್ ಹೌಸ್ ನಲ್ಲಿ ನಾಮಕರಣ ಶಾಸ್ತ್ರ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments