Webdunia - Bharat's app for daily news and videos

Install App

Ajith Kumar: ನಟ ಅಜಿತ್ ಕುಮಾರ್ ಗೆ ಶಸ್ತ್ರಚಿಕಿತ್ಸೆ: ಹೇಳಿಕೆ ಬಿಡುಗಡೆ ಮಾಡಿದ ವಕ್ತಾರರು

Krishnaveni K
ಶನಿವಾರ, 9 ಮಾರ್ಚ್ 2024 (09:40 IST)
ಚೆನ್ನೈ: ತಮಿಳು ಸ್ಟಾರ್ ನಟ ಅಜಿತ್ ಕುಮಾರ್ ಶಸ್ತ್ರಚಿಕಿತ್ಸೆಗೊಳಗಾಗಿದ್ದು ಅವರ ಆರೋಗ್ಯ ಸ್ಥಿತಿ ಬಗ್ಗೆ ನಾನಾ ಊಹಾಪೋಹಗಳು ಹರಿದಾಡುತ್ತಿದೆ. ಈ ಬಗ್ಗೆ ಇದೀಗ ಆಸ್ಪತ್ರೆ ಮೂಲಗಳಿಂದಲೇ ಸ್ಪಷ್ಟನೆ ನೀಡುತ್ತಿದೆ.

ಅಜಿತ್ ಮೆದುಳಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ ಎಂಬಿತ್ಯಾದಿ ರೂಮರ್ ಹರಿದಾಡುತ್ತಿತ್ತು.  ಈ ಹಿನ್ನಲೆಯಲ್ಲಿ ಅಜಿತ್ ಪರ ಅವರ ವಕ್ತಾರರೇ ಮಾಧ‍್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿ ಎಲ್ಲಾ ರೂಮರ್ ಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಸದ್ಯಕ್ಕೆ ಅಜಿತ್ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿದ್ದಾರೆ.

ಅಜಿತ್ ಅವರ ಮೆದುಳಿನಲ್ಲಿ ಸಮಸ್ಯೆಯಾಗಿದೆ, ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ ಎಂಬುದೆಲ್ಲಾ ಸುಳ್ಳು ಎಂದು ವಕ್ತಾರರು ಸ್ಪಷ್ಟನೆ ನೀಡಿದ್ದಾರೆ. ‘ಅಜಿತ್ ಗುರುವಾರ ಆಸ್ಪತ್ರೆಗೆ ದಾಖಲಾದರು. ಅವರ ಕಿವಿಯಿಂದ ಮೆದುಳಿಗೆ ಕನೆಕ್ಟ್ ಆಗುವ ನರದಲ್ಲಿ ಸಣ್ಣ ಊತವಾಗಿತ್ತು. ಇದನ್ನು ಸಾಮಾನ್ಯ ವೈದ್ಯಕೀಯ ಪ್ರಕ್ರಿಯೆಯಿಂದ ಸರಿಪಡಿಸಲಾಗಿದೆ. ಸದ್ಯಕ್ಕೆ ಅಜಿತ್ ಆರೋಗ್ಯವಾಗಿದ್ದಾರೆ. ಐಸಿಯುವಿನಿಂದ ವಾರ್ಡ್ ಗೆ ನಡೆದೇ ಹೋಗಿದ್ದಾರೆ’ ಎಂದು ವಕ್ತಾರರು ಸ್ಪಷ್ಟನೆ ನೀಡಿದ್ದಾರೆ.

ಸದ್ಯಕ್ಕೆ ಅಜಿತ್ ವಿದಾ ಮುಯುರಾಚಿ ಸಿನಿಮಾ ಶೂಟಿಂಗ್ ಗಾಗಿ ವಿದೇಶದಲ್ಲಿದ್ದರು. ಆದರೆ ಇತ್ತೀಚೆಗೆ ಮಗನ ಹುಟ್ಟುಹಬ್ಬ ಆಚರಿಸಲು ಭಾರತಕ್ಕೆ ಬಂದಿದ್ದರು. ಈ ವೇಳೆ ಆರೋಗ್ಯ ಸಮಸ್ಯೆಯಾಗಿದೆ. ಗುಣಮುಖರಾದ ತಕ್ಷಣ ಮತ್ತೆ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments