Webdunia - Bharat's app for daily news and videos

Install App

ಕುಟುಂಬ ಸಮೇತ ಅಣ್ಣಮ್ಮ ದೇವಿಯ ಆಶೀರ್ವಾದ ಪಡೆದ ದಿನಕರ್ ತೂಗುದೀಪ‍

Sampriya
ಭಾನುವಾರ, 6 ಅಕ್ಟೋಬರ್ 2024 (16:56 IST)
Photo Courtesy X
ಬೆಂಗಳೂರು: ಹತ್ಯೆ ಪ್ರಕರಣ ಸಂಬಂಧ ಬಂಧಿಯಾಗಿರುವ ನಟ ದರ್ಶನ್ ಅವರನ್ನು ಈ ಪ್ರಕರಣದಿಂದ ಹೊರಗೆ ತರಲು ಹೋರಾಡುತ್ತಿರುವವರಲ್ಲಿ ದಿನಕರ್ ತೂಗುದೀಪ ಸಹ ಒಬ್ಬರು. ಅಣ್ಣನ ಪರವಾಗಿ ಕಾನೂನಿನ ಹೋರಾಟದ ಜತೆಗೆ ದೇವರ ಮೊರೆ ಹೋಗುತ್ತಿದ್ದಾರೆ.

ನಿನ್ನೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಆಗುತ್ತಿದ್ದ ಹಾಗೇ ಇಂದು ದಿನಕರ್ ಅವರು ಕುಟುಂಬ ಸಮೇತ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಬೆಂಗಳೂರಿನಲ್ಲಿರುವ ಅಣ್ಣಮ್ಮ ದೇವಿ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ತಾಯಿ ಆಶೀರ್ವಾದ ಪಡೆದರು.

ಅತ್ತಿಗೆ ವಿಜಯಲಕ್ಷ್ಮಿ ಜತೆಗೆ ಆಗಾಗ ಬಳ್ಳಾರಿ ಜೈಲಿಗೆ ಆಗಮಿಸುತ್ತಿರುವ ದಿನಕರ್ ಅವರು ಹೇಗಾದರೂ ದರ್ಶನ್ ಅವರನ್ನು ಹೊರತರಲು ಪ್ರಯತ್ನಿಸುತ್ತಿದ್ದಾರೆ.

ನಿನ್ನೆ ದಿನಕರ್ ಅವರು ತಮ್ಮ ರಾಯಲ್ ಸಿನಿಮಾ ಕಾರ್ಯಕ್ರಮದಲ್ಲಿ ದರ್ಶನ್ ಪರ ಅಭಿಮಾನಿಗಳು ಕೂಗಿದಾಗ, ನಿಮ್ಮ ಪ್ರೀತಿ ಹಾರೈಕೆ ಇರುವವರೆಗೂ ಡಿಬಾಸ್‌ಗೆ ಯಾರು ಏನೂ ಮಾಡಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದರು. ಇದುವರೆಗೂ ದರ್ಶನ್ ಕುಟುಂಬದವರು ಬಹಿರಂಗವಾಗಿ ಎಲ್ಲೂ ದರ್ಶನ್ ಬಗ್ಗೆ ಮಾತನಾಡಿರಲಿಲ್ಲ. ಇದೀಗ ಮೊದಲ ಬಾರಿ ದರ್ಶನ್ ಬಗ್ಗೆ ಪ್ರತಿಕ್ರಿಯಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments