Webdunia - Bharat's app for daily news and videos

Install App

ನಿರ್ದೇಶಕ ಎಸ್ ನಾರಾಯಣ್‌ ಗೆ ತಮಿಳುನಾಡು ಮೂಲದ ಜ್ಯೋತಿಷಿಯಿಂದ ವಂಚನೆ

Webdunia
ಶನಿವಾರ, 1 ಸೆಪ್ಟಂಬರ್ 2018 (07:20 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎಸ್ ನಾರಾಯಣ್‌  ಅವರಿಗೆ ತಮಿಳುನಾಡು ಮೂಲದ ಜ್ಯೋತಿಷಿಯೊಬ್ಬರು ಕಡಿಮೆ ಬಡ್ಡಿಗೆ ಸಾಲ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ ವಿಚಾರ ಇದೀಗ ಬೆಳಕಿಗೆ ಬಂದಿದೆ.


ತಮಿಳುನಾಡು ಮೂಲದ ಜ್ಯೋತಿಷಿ ಮಂದಾರ ಮೂರ್ತಿ,  ನಿರ್ದೇಶಕ ಎಸ್ ನಾರಾಯಣ್‌  ಅವರಿಗೆ ಎಪ್ಪತ್ತು ಕೋಟಿ ಹಣವನ್ನು ಕಡಿಮೆ ಬಡ್ಡಿಗೆ ಸಾಲ ಕೊಡಿಸುವುದಾಗಿ ಹೇಳಿ ಅದಕ್ಕಾಗಿ 20 ಲಕ್ಷ ನಿರ್ವಹಣಾ ಶುಲ್ಕವನ್ನು ನಿರ್ದೇಶಕ ಎಸ್ ನಾರಾಯಣ್‌  ಅವರಿಂದ ತೆಗೆದುಕೊಂಡಿದ್ದಾರಂತೆ.


ಆದರೆ ಸಾಲವೂ ಕೊಡದೆ, ಕೊಟ್ಟ ಹಣವನ್ನು ಹಿಂದಿರುಗಿಸದೆ ಜ್ಯೋತಿಷಿ ಮಂದಾರ ಮೂರ್ತಿ ವಂಚಿಸಿದ್ದಾನೆ ಎಂದು ಎಸ್ ನಾರಾಯಣ್ ಮಂದಾರ ಮೂರ್ತಿಯ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ಈ ದೂರಿನನ್ವಯ ಮಂದಾರ ಮೂರ್ತಿ ಅವರನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments