Select Your Language

Notifications

webdunia
webdunia
webdunia
webdunia

ಕಳಚಿದ ಅನುಶ್ರೀ ಮುಖವಾಡ; ಅರೆಸ್ಟ್ ಆಗೋದು ಪಕ್ಕಾ ಎಂದ ಸಂಬರಗಿ

ಪ್ರಶಾಂತ್ ಸಂಬರಗಿ
ಬೆಂಗಳೂರು , ಬುಧವಾರ, 8 ಸೆಪ್ಟಂಬರ್ 2021 (14:08 IST)
ಬೆಂಗಳೂರು : ಡ್ರಗ್ಸ್ ಪ್ರಕರಣದ ಚಾರ್ಜ್ ಶೀಟ್ ನಲ್ಲಿ ಆಂಕರ್ ಅನುಶ್ರೀ ಹೆಸರು ಉಲ್ಲೇಖ ವಿಚಾರವಾಗಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ, ಅನುಶ್ರೀ ಮುಖವಾಡ ಕಳಚಿದೆ. ಜೈಲಿಗೆ ಹೋಗುವುದು ಪಕ್ಕಾ ಎಂದು ಹೇಳಿದ್ದಾರೆ.

2020ರಲ್ಲಿ ಶುಗರ್ ಡ್ಯಾಡಿ ಎಂದು ಟ್ವೀಟ್ ಮಾಡಿದ್ದೆ. ಆಗ ಮಾಜಿ ಸಿಎಂ ಒಬ್ಬರು ಊಹಾಪೋಹಕ್ಕೆ ನಾಂದಿ ಹಾಡಿದ್ದರು. ಮುಂದಿನ ದಿನಗಳಲ್ಲಿ ಈ ಕುರಿತ ಆಡಿಯೋ ರಿಲೀಸ್ ಮಾಡ್ತೀನಿ. ಡ್ರಗ್ಸ್ ಪ್ರಕರಣದಲ್ಲಿ ಅನುಶ್ರೀಯನ್ನು ಬಿಟ್ಟುಕಳುಹಿಸಲಾಗಿದೆ. ತನಿಖೆ ನಡೆಸುತ್ತಿದ್ದ ಮಂಗಳೂರು ಸಿಸಿಬಿ ಪೊಲೀಸ್ ಅಧಿಕಾರಿ ಶಿವಪ್ರಕಾಶ್ ನಾಯಕ್ ಎತ್ತಂಗಡಿ ಮಾಡಲಾಗಿದೆ. ಕೇಸ್ ನಲ್ಲಿ ಮಂಗಳೂರು ಪೊಲೀಸರು ವೀಕ್ ಆಗಿದ್ದಾರೆ. ಪ್ರಕರಣದ ಮರು ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಡ್ರಗ್ಸ್ ಪ್ರಕರಣದಲ್ಲಿ ಕಿಶೋರ್ ಶೆಟ್ಟಿ, ತರುಣ್ ಬಂಧನವಾದಾಗಲೇ ತರುಣ್, ಅನುಶ್ರೀ ಡ್ರಗ್ಸ್ ಸೇವನೆ ಹಾಗೂ ಪೆಡ್ಲಿಂಗ್ ಬಗ್ಗೆ ಬಾಯ್ಬಿಟ್ಟಿದ್ದ. ಅನುಶ್ರೀ ಬಚಾವ್ ಮಾಡಲು ಬಳಿಕ ತರುಣ್ ನನ್ನು ಬಿಡುಗಡೆ ಮಾಡಲಾಗಿದೆ. ಪೊಲೀಸ್ ವಿಚಾರಣೆಗೆ ಹಾಜರಾಗಲು ಅನುಶ್ರೀ ನಾಟಕ ಆಡಿದ್ರು. ಬಳಿಕ ಫೇಸ್ ಬುಕ್ ಲೈವ್ ಗೆ ಬಂದು ನಾಟಕ ಮಾಡಿದ್ರು. ನನ್ನನ್ನು ಸ್ತ್ರೀ ವಿರೋಧಿ ಎನ್ನುವ ರೀತಿ ಬಿಂಬಿಸಿದರು ಎಂದು ಗುಡುಗಿದ್ದಾರೆ.
ಅಲ್ಲದೇ ಅನುಶ್ರೀ ಮಂಗಳೂರಿನಲ್ಲಿ 12 ಕೋಟಿ ರೂಪಾಯಿ ಮನೆ ಕಟ್ಟಿಸಿದ್ದಾರೆ. ಬೆಂಗಳೂರಿನಲ್ಲಿ 4 ಕೋಟಿ ಮೌಲ್ಯದ ಮನೆ ನಿರ್ಮಿಸಿದ್ದಾರೆ. ಇದಕ್ಕೆಲ್ಲ ಹಣ ಟಿವಿ ಶೋದಿಂದಲೇ ಬಂದಿದ್ದರೆ ಒಳ್ಳೆಯದು. ಆದರೆ ಅನುಶ್ರೀ ಕಾನೂನು ಬಾಹಿರ ಚಟುವಟಿಕೆ ನಡೆಸಿದ್ದಾರೆ ಎಂದು ಕಿಡಿಕಾರಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಡ್ರಗ್ ಕೇಸ್ನಲ್ಲಿ ಅನುಶ್ರೀಗೆ ಬಿಗ್ ರಿಲೀಫ್! ಚಾರ್ಜ್ಶೀಟ್ನಲ್ಲಿ ಹೆಸರು ಕೈಬಿಟ್ಟಿದ್ದೇಕೆ?