Webdunia - Bharat's app for daily news and videos

Install App

ಚಿತ್ರರಂಗದವರಿಗೆ ಗೌರವ ಕೊಡಿ ಎಂದ ಕಿಚ್ಚ ಸುದೀಪ್ ಗೆ ಡಿಕೆ ಶಿವಕುಮಾರ್ ಹೇಳಿದ್ದೇನು

Krishnaveni K
ಶನಿವಾರ, 21 ಜೂನ್ 2025 (13:56 IST)
ಬೆಂಗಳೂರು: ಚಿತ್ರರಂಗದವರ ನಟ್ಟು ಬೋಲ್ಟ್ ಸರಿ ಮಾಡ್ತೀನಿ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಗೆ ನಟ ಕಿಚ್ಚ ಸುದೀಪ್ ಸಿನಿಮಾದವರಿಗೂ ಗೌರವ ಕೊಡಿ ಎಂದಿದ್ದಾರೆ. ಇದಕ್ಕೀಗ ಡಿಕೆಶಿ ತಿರುಗೇಟು ನೀಡಿದ್ದಾರೆ.

ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಭಾಗಿಯಾದ ಕಿಚ್ಚ ಸುದೀಪ್ ಗೆ ನಟ್ಟು ಬೋಲ್ಟ್ ಹೇಳಿಕೆ ಬಗ್ಗೆ ಪ್ರಶ್ನೆ ಎದುರಾಗಿತ್ತು. ಇದಕ್ಕೆ ಉತ್ತರಿಸಿದ್ದ ಅವರು ‘ನಾವು ಓಡಾಡೋ ಕಾರುಗಳ ನಟ್ಟು ಬೋಲ್ಟ್ ಸರಿ ಮಾಡೋಕೆ ಮೆಕ್ಯಾನಿಕ್ ಬೇಕು. ಅದರ ಬಗ್ಗೆ ನಾನು ಮಾತನಾಡಲು ಹೋದರೆ ಸರಿಯಾಗಲ್ಲ. ಯಾಕೆಂದರೆ ಕಾರಿನ ವಿಚಾರ ಮೆಕ್ಯಾನಿಕ್ ಗಳಿಗೆ ಮಾತ್ರ ಗೊತ್ತಿರುತ್ತದೆ. ಅದೇ ರೀತಿ ಚಿತ್ರರಂಗದವರ ಬಗ್ಗೆ ಚಿತ್ರರಂಗದವರಿಗೇ ಗೊತ್ತು. ಚಿತ್ರರಂಗದವರಿಗೂ ಗೌರವ ಕೊಡಿ’ ಎಂದು ಕಿಚ್ಚ ಸುದೀಪ್ ಹೇಳಿದ್ದರು.

ಅವರ ಹೇಳಿಕೆ ಡಿಕೆ ಶಿವಕುಮಾರ್ ಇಂದು ತಿರುಗೇಟು ನೀಡಿದ್ದಾರೆ. ಮಾಧ್ಯಮಗಳು ಸುದೀಪ್ ಅವರ ಪ್ರತಿಕ್ರಿಯೆ ಬಗ್ಗೆ ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ‘ಎಲ್ಲದಕ್ಕೂ ಕಾಲವೇ ಉತ್ತರಿಸುತ್ತದೆ’ ಎಂದಿದ್ದಾರೆ. ಡಿಕೆ ಶಿವಕುಮಾರ್ ಮತ್ತು ಕಿಚ್ಚ ಸುದೀಪ್ ನಡುವೆ ಉತ್ತಮ ಬಾಂಧವ್ಯವಿದೆ. ಬೆಂಗಳೂರು ಆಂತಾರಾಷ್ಟ್ರೀಯ ಸಿನಿಮಾ ಉತ್ಸವದಲ್ಲಿ ಡಿಕೆಶಿ ಚಿತ್ರರಂಗದವರು ಗೈರಾಗಿದ್ದಕ್ಕೆ ‘ನಟ್ಟು ಬೋಲ್ಟ್ ಸರಿ ಮಾಡೋದು ಹೇಗೆ ಗೊತ್ತು’ ಎಂದಿದ್ದಕ್ಕೆ ಸುದೀಪ್ ಮುಲಾಜಿಲ್ಲದೇ ತಿರುಗೇಟು ಕೊಟ್ಟಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿತ್ಯಾ ಪಾತ್ರ ನೋಡಿ ಕೆಟ್ಟ ಕಾಮೆಂಟ್ ಗೆ ಬೇಸರಗೊಂಡ ನಮ್ರತಾ ಗೌಡ ಹೇಳಿದ್ದೇನು

777 ಚಾರ್ಲಿ ಸಿನಿಮಾಕ್ಕೆ ನಾಲ್ಕು ರಾಜ್ಯ ಚಲನಚಿತ್ರ ಪ್ರಶಸ್ತಿ: ಪ್ರಶಸ್ತಿ ಗೆದ್ದ ರಕ್ಷಿತ್‌ ಶೆಟ್ಟಿ ಮೊದಲ ಪ್ರತಿಕ್ರಿಯೆ

ಹೊಂಬಾಳೆ ಫಿಲಂಸ್ ಮನವಿಗೂ ಬೆಲೆಯಿಲ್ಲ, ಕಾಂತಾರ ಕ್ಲೈಮ್ಯಾಕ್ಸ್ ದೃಶ್ಯಗಳೇ ಲೀಕ್

ಜೈಲಿನಲ್ಲಿ ದರ್ಶನ್ ಸ್ಥಿತಿಕಂಡು ಪತ್ನಿ ವಿಜಯಲಕ್ಷ್ಮಿಕಣ್ಣೀರು ಹಾಕಿದ್ದು ಯಾಕೆ ಗೊತ್ತಾ

ಪ್ರತಿಯೊಬ್ಬ ಫಿಲ್ಮ್ ಮೇಕರ್ಸ್‌ ನಾಚಿಕೆಪಡಬೇಕು: ಕಾಂತಾರ ನೋಡಿ ರಾಮ್‌ ಗೋಪಾಲ್ ವರ್ಮಾ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments