Webdunia - Bharat's app for daily news and videos

Install App

ದರ್ಶನ್ ಮಗ ವಿನೀಶ್ ಶಾಲೆ ಬಿಟ್ಟಿದ್ದೇಕೆ: ಇಂಟ್ರೆಸ್ಟಿಂಗ್ ವಿಚಾರ ಹೇಳಿದ ಡಿಕೆ ಶಿವಕುಮಾರ್

Krishnaveni K
ಬುಧವಾರ, 24 ಜುಲೈ 2024 (14:43 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಥಿತರಾಗಿರುವ ನಟ ದರ್ಶನ್ ಗಾಗಿ ಅವರ ಪತ್ನಿ ವಿಜಯಲಕ್ಷ್ಮಿ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಡಿಕೆಶಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಇದರ ನಡುವೆ ಡಿಕೆ ಶಿವಕುಮಾರ್ ದರ್ಶನ್ ಪುತ್ರ ವಿನೀಶ್ ಶಾಲೆ ಬಿಟ್ಟ ವಿಚಾರದ ಬಗ್ಗೆ ಮಾತನಾಡಿದ್ದಾರೆ. ದರ್ಶನ್ ಮಗ ನಮ್ಮ ಸ್ಕೂಲಲ್ಲೇ ಓದುತ್ತಿದ್ದ. ನನಗೆ ನೆನಪಿದೆ. ಆದರೆ ಕಳೆದ ವರ್ಷ ಪೋಷಕರು ಬರಲೇಬೇಕೆಂದು ಅವರನ್ನು ಕರೆಸಿ ಬುದ್ಧಿವಾದ ಎಲ್ಲಾ ಹೇಳಿದ್ರು. ನಮ್ಮ ಶಾಲೆಯಲ್ಲಿ ಮಕ್ಕಳ ವರ್ತನೆ ಬಗ್ಗೆ ಪೋಷಕರನ್ನು ಕರೆಸುತ್ತಲೇ ಇರ್ತೀವಿ. ಈತನೂ (ದರ್ಶನ್) ಹೋಗಿದ್ದ ಅಂತೆ’ ಎಂದಿದ್ದಾರೆ.

ಇದಾದ ಬಳಿಕ ದರ್ಶನ್ ಪುತ್ರನನ್ನು ಬೇರೊಂದು ಶಾಲೆಗೆ ಸೇರಿಸಲಾಯಿತಂತೆ. ಯಾವುದೋ ದೂರದ ಇಂಟರ್ ನ್ಯಾಷನಲ್ ಸ್ಕೂಲ್ ಗೆ ಸೇರಿಸಿದ್ದಾರಂತೆ ಎಂದು ಡಿಕೆಶಿ ಹೇಳಿದ್ದಾರೆ. ಈಗ ಪಾಪ ಆ ಮಗು ಶಾಲೆಗೆ ಸೇರಲು ಏನಾದರೂ ಸಹಾಯ ಮಾಡಬೇಕು ಅಂದರೆ ಪ್ರಿನ್ಸಿಪಾಲ್ ಗೆ ಮಾತಾಡ್ತೀನಿ, ಏನಾದರೂ ಮಾಡೋಣ’ ಎಂದಿದ್ದಾರೆ.

ಕಳೆದ ವರ್ಷವೇ ದರ್ಶನ್ ಮಗನನ್ನು ಡಿಕೆಶಿ ನಡೆಸಿಕೊಂಡು ಹೋಗುತ್ತಿರುವ ಶಾಲೆ ಬಿಡಿಸಲಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ. ಇದೀಗ ಡಿಕೆಶಿ ಮಾತು ಗಮನಿಸಿದರೆ ತಂದೆ ಮಾಡಿದ ಪ್ರಕರಣದಿಂದ ಮಗ ವಿನೀಶ್ ಭವಿಷ್ಯಕ್ಕೂ ಕುತ್ತಾಗಿದೆ ಎನಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments