Webdunia - Bharat's app for daily news and videos

Install App

ಡಿಕೆಶಿ ನಟ್ಟು ಬೋಲ್ಟ್ ಹೇಳಿಕೆ: ಕಾಂತಾರ, ಟಾಕ್ಸಿಕ್ ಸಿನಿಮಾಗೆ ಬೇಕೆಂದೇ ಕಾಟ ಕೊಟ್ಟಿತಾ ಸರ್ಕಾರ

Krishnaveni K
ಮಂಗಳವಾರ, 4 ಮಾರ್ಚ್ 2025 (13:35 IST)
ಬೆಂಗಳೂರು: ಬೆಂಗಳೂರು ಚಿತ್ರೋತ್ಸವದಲ್ಲಿ ಡಿಕೆ ಶಿವಕುಮಾರ್ ನಟ್ಟು, ಬೋಲ್ಟ್ ಹೇಳಿಕೆ ಈಗ ಭಾರೀ ಚರ್ಚೆಯಾಗುತ್ತಿದೆ. ಹಾಗಿದ್ದರೆ ಈ ಹಿಂದೆ ಕಾಂತಾರ, ಟಾಕ್ಸಿಕ್ ಸಿನಿಮಾ ಶೂಟಿಂಗ್ ಗೆ ಬೇಕೆಂದೇ ತೊಂದರೆ ನೀಡಲಾಯಿತೇ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ.
 
ಬೆಂಗಳೂರು ಚಿತ್ರೋತ್ಸವಕ್ಕೆ ಹಾಜರಾಗದ ಕಾರಣಕ್ಕೆ ಸ್ಯಾಂಡಲ್ ವುಡ್ ಸ್ಟಾರ್ ಕಲಾವಿದರ ಮೇಲೆ ಸಿಟ್ಟಾಗಿದ್ದ ಡಿಕೆ ಶಿವಕುಮಾರ್, ಎಲ್ಲರೂ ಮುಂದೆ ನಮ್ಮ ಬಳಿಯೇ ಸಹಾಯ ಕೇಳಿಕೊಂಡು ಬರುತ್ತಾರೆ. ಎಲ್ಲರ ನಟ್ಟು ಬೋಲ್ಟ್ ಟೈಟ್ ಮಾಡೋದು ಹೇಗೆ ಎಂದು ನಮಗೆ ಗೊತ್ತಿದೆ ಎಂದಿದ್ದರು. ಅವರ ಹೇಳಿಕೆಗೆ ಈಗ ಚಿತ್ರರಂಗದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
 
ವಿಶೇಷವಾಗಿ ಸುದೀಪ್, ಯಶ್ ಮುಂತಾದ ನಟರನ್ನು ಗುರಿಯಾಗಿಟ್ಟುಕೊಂಡೇ ಡಿಕೆಶಿ ಈ ಹೇಳಿಕೆ ನೀಡಿದ್ದಾರೆ ಎಂದು ಚರ್ಚೆಯಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ಟಾಕ್ಸಿಕ್ ಸಿನಿಮಾ ಚಿತ್ರೀಕರಣಕ್ಕೆ ಅರಣ್ಯ ಪ್ರದೇಶ ಬಳಸಲಾಗಿದೆ ಎಂದು  ವಿವಾದವಾಗಿತ್ತು.
 
ಇದಾದ ಬಳಿಕ ರಿಷಭ್ ಶೆಟ್ಟಿ ನಾಯಕರಾಗಿರುವ ಕಾಂತಾರ ಚಾಪ್ಟರ್ 1 ಚಿತ್ರೀಕರಣಕ್ಕೂ ಇದೇ ರೀತಿ ಅಡ್ಡಿಯಾಗಿತ್ತು. ಹೀಗಾಗಿ ಈ ಎರಡು ಸಿನಿಮಾಗೆ ಅಡ್ಡಿಮಾಡಿದ್ದೂ ಕಾಂಗ್ರೆಸ್ ನೇತೃತ್ವದ ಮೇಕೆದಾಟು ಹೋರಾಟಕ್ಕೆ ಬೆಂಬಲ ನೀಡಲಿಲ್ಲ ಎಂಬ ಕಾರಣಕ್ಕಾ ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Vincy Aloshious: ಡ್ರಗ್ಸ್ ಸೇವಿಸಿ ಅಸಭ್ಯವಾಗಿ ವರ್ತಿಸಿದ ನಟ ಶೈನ್ ಟಾಮ್ ವಿರುದ್ಧ ದೂರು ಕೊಟ್ಟ ವಿನ್ಸಿ ಅಲೋಶಿಯಸ್

Thalapathy Vijay: ಸಿನಿಮಾಗಳಲ್ಲಿ ನಮ್ಮನ್ನು ಭಯೋತ್ಪಾದಕರಂತೆ ತೋರಿಸ್ತೀರಿ: ದಳಪತಿ ವಿಜಯ್ ವಿರುದ್ಧ ಸಿಡಿದೆದ್ದ ಮುಸ್ಲಿಮರು

Kiccha Sudeep:ಬಿಲ್ಲ ರಂಗ ಬಾಷಾ ಸಿನಿಮಾ ಚಿತ್ರೀಕರಣ ಶುರು ಮಾಡಿದ ಸುದೀಪ್: ಇದೊಂದು ವಿಚಾರ ಆಮೇಲೆ ಹೇಳ್ತೀನಿ ಎಂದ ಕಿಚ್ಚ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಮುಂದಿನ ಸುದ್ದಿ
Show comments