ಕರಗ ಉತ್ಸವದಲ್ಲಿ ಡಿ ಬಾಸ್ ಪರ ಘೋಷಣೆ, ದೇವಿ ಸನ್ನಿದಿಯಲ್ಲಿ ಡಿಕೆ ಶಿವಕುಮಾರ್ ಹೇಳಿದ್ದೇನು

Sampriya
ಬುಧವಾರ, 24 ಜುಲೈ 2024 (15:50 IST)
ರಾಮನಗರ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಹೊರ ತರಲು ಪತ್ನಿ ವಿಜಯಲಕ್ಷ್ಮೀ ಅವರು ಶತಪ್ರಯತ್ನ ಮಾಡುತ್ತಿದ್ದಾರೆ. ಇನ್ನೂ ತಮ್ಮ ನೆಚ್ಚಿನ ನಟ ಆದಷ್ಟು ಬೇಗ ಬಿಡುಗಡೆಯಾಗಲಿ ಎಂದು ಡಿ ಬಾಸ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇದೀಗ ನಿನ್ನೆ ರಾಮನಗರ ಚಾಮುಂಡಿ ಉತ್ಸವದಲ್ಲೂ ದರ್ಶನ್ ಪರ ಅಭಿಮಾನಿಗಳು ಘೋಷಣೆ ಕೂಗಿದರು.

ಡಿಸಿಎಂ ಡಿಕೆ ಶಿವಕುಮಾರ್ ಅವರು ಭಾಷಣ ಮಾಡಲು ವೇದಿಕೆಯತ್ತ ಬರುತ್ತಿರುವಾಗ ದರ್ಶನ್ ಅವರ ಅಭಿಮಾನಿಗಳು ಡಿ ಬಾಸ್, ಡಿ ಬಾಸ್ ಎಂದು ಕೂಗಿದ್ದಾರೆ. ಇದನ್ನು ಕೇಳಿದ ಡಿಕೆಶಿ ಅವರು ಪ್ರತಿಕ್ರಿಯಿಸಿ ದರ್ಶನ್ ಪತ್ನಿ ಅವರು ಭೇಟಿಗೆ ಅವಕಾಶ ಕೇಳಿದ್ದಾರೆ ಎಂದು ಹೇಳಿದ್ದರು. ಇದೀಗ ಅದರಂತೆ ವಿಜಯಲಕ್ಷ್ಮೀ ಅವರು ದರ್ಶನ್ ಸಹೋಧರ ದಿನಕರ್ ತೂಗುದೀಪ್ ಜತೆ ಡಿಸಿಎಂ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇನ್ನೂ ಕರಗ ಉತ್ಸವದಲ್ಲಿ ದರ್ಶನ್ ವಿಚಾರ ಪ್ರಸ್ತಾಪಿಸಿದ ಡಿಕೆ ಶಿವಕುಮಾರ್ ಅವರು, ಇನ್ನೂ ಏನಾದರೂ ಅನ್ಯಾಯ ಆಗಿದ್ದರೆ ಸರಿಪಡಿಸಲು ಪ್ರಯತ್ನ ಮಾಡುವೆ. ಆದರೆ, ನಾವು ಕಾನೂನಿಗೆ ಗೌರವ ಕೊಡಬೇಕು. ನಾವೆಲ್ಲ ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು. ಅನ್ಯಾಯ ಆಗಿದ್ದವರಿಗೆ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ. ನೊಂದ ಎಲ್ಲರಿಗೂ ತಾಯಿ ಚಾಮುಂಡೇಶ್ವರಿ ಅನುಗ್ರಹ ನೀಡಲಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ಮುಂದಿನ ಸುದ್ದಿ
Show comments