Webdunia - Bharat's app for daily news and videos

Install App

ಕೆಸಿಸಿ 2 ಗೆ ಆಗಮಿಸಿದ ಕ್ರಿಕೆಟ್ ದಿಗ್ಗಜರು ಯಾರ ಪರವಾಗಿ ಆಡಲಿದ್ದಾರೆ ಗೊತ್ತೇ?

Webdunia
ಸೋಮವಾರ, 23 ಜುಲೈ 2018 (14:31 IST)
ಬೆಂಗಳೂರು : ಕಿಚ್ಚ ಸುದೀಪ್  ನೇತೃತ್ವದಲ್ಲಿ ನಡೆಯುತ್ತಿರುವ ಕರ್ನಾಟಕ ಚಲನಚಿತ್ರ ಕಪ್ (ಕೆಸಿಸಿ) ಮೊದಲನೇ ಬಾರಿ ಮಾಧ್ಯಮ ಹಾಗೂ ಸಿನಿಮಂದಿ ಜೊತೆ ನಡೆದಿತ್ತು. ಆದರೆ ಈ ಬಾರಿ ಇದರಲ್ಲಿ ಇಂಟರ್ ​ನ್ಯಾಷನಲ್​ ಆಟಗಾರರು ಕೂಡ ಭಾಗಿಯಾಗಿರುವ ವಿಷಯ ಈಗಾಗಲೇ ಎಲ್ಲರಿಗೂ ತಿಳಿದೆ ಇದೆ. ಹಾಗೇ ಈ ಸೆಲೆಬ್ರಿಟಿಗಳು  ಯಾರ ಪರ ಆಡ್ತಾರೆ ಅನ್ನೋ ಮಾಹಿತಿ ಇಲ್ಲಿದೆ ನೋಡಿ.


ಇಂಟರ್ ನ್ಯಾಷನಲ್ ಆಟಗಾರರಾದ ವಿರೇಂದ್ರ ಸೆಹ್ವಾಗ್ ಕದಂಬ ಲಯನ್ಸ್ ನಲ್ಲಿ ಆಟವಾಡಿದ್ರೆ, ಹರ್ಷೆಲ್​ ಗಿಬ್ಸ್ ಹೊಯ್ಸಳ ಈಗಲ್ಸ್ ತಂಡದಲ್ಲಿರ್ತಾರೆ. ತಿಲಕರತ್ನೆ ದಿಲ್ಸ್ಯಾನ್ ಒಡೆಯರ್ ಚಾರ್ಜರ್ಸ್ ಹಾಗೂ ಲ್ಯಾನ್ಸ್​ ಕ್ಲೂಸ್ನರ್ ಗಂಗಾ ವಾರಿಯರ್ಸ್ ನಲ್ಲಿದ್ದಾರೆ. ಇನ್ನು ಓವೈ ಷಾ ರಾಷ್ಟ್ರಕೂಟ ಪ್ಯಾಂಥರ್ಸ್ ಹಾಗೂ ಆಯಡಂ ಗಿಲ್​ಕ್ರಿಸ್ಟ್ ವಿಜಯನಗರ ಪೇಟ್ರಿಯಟ್ಸ್ ತಂಡದಲ್ಲಿದ್ದಾರೆ.


ಇನ್ನು ಸಿನಿಮಾ ನಟರಾದ ಸೆಂಚುರಿ ಸ್ಟಾರ್ ಶಿವರಾಜ್​ ಕುಮಾರ್​ ವಿಜಯನಗರ ಪೇಟ್ರಿಯಟ್ಸ್, ಪುನೀತ್ ರಾಜಕುಮಾರ್ ಗಂಗಾ ವಾರಿಯರ್ಸ್, ಸುದೀಪ್ ಕದಂಬ ಲಯನ್ಸ್, ಯಶ್ ರಾಷ್ಟ್ರಕೂಟ ಪ್ಯಾಂಥರ್ಸ್, ಉಪೇಂದ್ರ ಹೊಯ್ಸಳ ಈಗಲ್ಸ್, ಹಾಗೂ ಗಣೇಶ್ ಒಡೆಯರ್ ಚಾರ್ಜರ್ಸ್ ತಂಡದಲ್ಲಿದ್ದಾರೆ.


ಈ ಬಾರಿಯ ಕೆಸಿಸಿ ಉದ್ಘಾಟನಾ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್​, ಅಂಬರೀಶ್​, ಜನಾರ್ಧನ ರೆಡ್ಡಿ, ಸುಮಲತಾ, ಶಿವರಾಜ್​ಕುಮಾರ್​, ಉಪೇಂದ್ರ, ಗಣೇಶ್​, ರಾಕ್​ಲೈನ್ ವೆಂಕಟೇಶ್​, ಶೃತಿ ಹಾಸನ್​ ಮತ್ತು ಮಾನ್ವಿತಾ ಹಾಜರಿದ್ದರು. ಕೆಸಿಸಿ ಟೂರ್ನಮೆಂಟ್​ ಸೆಪ್ಟೆಂಬರ್​ 8 ಮತ್ತು 9ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments