Webdunia - Bharat's app for daily news and videos

Install App

ರಜನಿಕಾಂತ್ ಬಗ್ಗೆ ದೀಪಿಕಾ ಪಡುಕೋಣೆ ಹೇಳಿದ್ದೇನು ಗೊತ್ತಾ?

Webdunia
ಸೋಮವಾರ, 20 ನವೆಂಬರ್ 2023 (11:13 IST)
ತಾನು ಯಾವಾಗ ಚೆನ್ನೈ ಗೆ ಬಂದರೂ ಆಗ ತನಗೆ ರಜನಿಕಾಂತ್ ಅವರ ಮನೆಯಿಂದ ಊಟ ಬರುತ್ತದೆ. ತಾನು ಯಾವಾಗ ಚೆನ್ನೈ ಗೆ ಬಂದರೂ ಐಶ್ವರ್ಯ ಮತ್ತು ಸೌಂದರ್ಯ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದಾಳೆ. ಅವರು ನನ್ನ ಕುಟುಂಬದ ಸದಸ್ಯರಂತೆ ಆಗಿದ್ದಾರೆ ಎಂದು ಹೇಳಿದ್ದಲ್ಲದೆ, ಅವರು ಮುಂಬೈ ಗೆ ಬಂದರೆ ತನ್ನನ್ನು ಭೇಟಿ ಮಾಡದೆ ಹೋಗುವುದಿಲ್ಲ ಎಂದು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸಂತಸ ವ್ಯಕ್ತಪಡಿಸಿದ್ದಾರೆ.
 
ಚೆನ್ನೈಗೆ ಬಂದರೆ ತನಗೆ ರಜನಿಕಾಂತ್  ಅವರ ಮನೆಯಿಂದ ಊಟ ಬರುತ್ತದೆ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾಳೆ ಮುದ್ದು ಹುಡುಗಿ ದೀಪಿಕ ಪಡುಕೋಣೆ. ಗೆಲುವಿನ ಕುದುರೆ ಆಗಿರುವ ದೀಪಿ ಇತ್ತೀಚಿಗೆ ತನ್ನ ಹೊಸ ಚಿತ್ರ ಪ್ರಮೋಟ್ ಮಾಡಲೆಂದು ಚೆನ್ನೈಗೆ ಬಂದಿದ್ದಳು. 
 
ಚೆನ್ನೈ ಗೆ ಬಂದ ಸಂದರ್ಭದಲ್ಲಿ ಪತ್ರಕರ್ತರು ನೀವು ಯಾಕೆ ಕೊಚ್ಚಾಡಿಯನ್ ಬಳಿಕ ತಮಿಳು ಚಿತ್ರಗಳಲ್ಲಿ ನಟಿಸಿಲ್ಲ ಎಂದು ದೀಪಿ ಬಳಿ ಕೇಳಿದರು, ಆಗ ಆಕೆ ಯಾವ ಭಾಷೆಯ ಚಿತ್ರವಾದರೂ ನಟಿಸಲು ತಾನು ಸಿದ್ಧ ಹಾಗೂ ಹೀರೋ ಬಗ್ಗೆ ಹೆಚ್ಚು ಆದ್ಯತೆ ನೀಡಲ್ಲ ಎಂದು ಹೇಳಿದ್ದಲ್ಲದೆ, ತನ್ನ ಪಾತ್ರಕ್ಕೆ ಪ್ರಾಮುಖ್ಯತೆ ಇದೆಯೇ ಎನ್ನುವ ಸಂಗತಿಗೆ ಹೆಚ್ಚು ಗಮನ ನೀಡುತ್ತೇನೆ. ರಜನಿಕಾಂತ್ ಅವರ ಜೊತೆ ಕೊಚ್ಚಾಡಿಯನ್ ಅಭಿನಯ ಚೆನ್ನಾಗಿತ್ತು ಎಂದು ಈ ಸಂದರ್ಭದಲ್ಲಿ ಹೇಳಿದ್ದಾಳೆ.
 
ಅದೇ ರೀತಿ ನಿರ್ದೇಶಕ ಮಣಿರತ್ನಂ ಅವರ ಜೊತೆ ಕೆಲಸ ಮಾಡುವ ಆಸೆ ಇದೆ, ಈ ಮೊದಲು ಅವರ ನಿರ್ದೇಶನದ ಚಿತ್ರದಲ್ಲಿ ನಟಿಸುವ ಅವಕಾಶ ದೊರೆತಿದ್ದರು, ತಾನು ಅನಿವಾರ್ಯ ಕಾರಣಗಳಿಂದ ನಟಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾಳೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments