Webdunia - Bharat's app for daily news and videos

Install App

ರಜನಿಕಾಂತ್ ಬಗ್ಗೆ ದೀಪಿಕಾ ಪಡುಕೋಣೆ ಹೇಳಿದ್ದೇನು ಗೊತ್ತಾ?

Webdunia
ಸೋಮವಾರ, 20 ನವೆಂಬರ್ 2023 (11:13 IST)
ತಾನು ಯಾವಾಗ ಚೆನ್ನೈ ಗೆ ಬಂದರೂ ಆಗ ತನಗೆ ರಜನಿಕಾಂತ್ ಅವರ ಮನೆಯಿಂದ ಊಟ ಬರುತ್ತದೆ. ತಾನು ಯಾವಾಗ ಚೆನ್ನೈ ಗೆ ಬಂದರೂ ಐಶ್ವರ್ಯ ಮತ್ತು ಸೌಂದರ್ಯ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದಾಳೆ. ಅವರು ನನ್ನ ಕುಟುಂಬದ ಸದಸ್ಯರಂತೆ ಆಗಿದ್ದಾರೆ ಎಂದು ಹೇಳಿದ್ದಲ್ಲದೆ, ಅವರು ಮುಂಬೈ ಗೆ ಬಂದರೆ ತನ್ನನ್ನು ಭೇಟಿ ಮಾಡದೆ ಹೋಗುವುದಿಲ್ಲ ಎಂದು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸಂತಸ ವ್ಯಕ್ತಪಡಿಸಿದ್ದಾರೆ.
 
ಚೆನ್ನೈಗೆ ಬಂದರೆ ತನಗೆ ರಜನಿಕಾಂತ್  ಅವರ ಮನೆಯಿಂದ ಊಟ ಬರುತ್ತದೆ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾಳೆ ಮುದ್ದು ಹುಡುಗಿ ದೀಪಿಕ ಪಡುಕೋಣೆ. ಗೆಲುವಿನ ಕುದುರೆ ಆಗಿರುವ ದೀಪಿ ಇತ್ತೀಚಿಗೆ ತನ್ನ ಹೊಸ ಚಿತ್ರ ಪ್ರಮೋಟ್ ಮಾಡಲೆಂದು ಚೆನ್ನೈಗೆ ಬಂದಿದ್ದಳು. 
 
ಚೆನ್ನೈ ಗೆ ಬಂದ ಸಂದರ್ಭದಲ್ಲಿ ಪತ್ರಕರ್ತರು ನೀವು ಯಾಕೆ ಕೊಚ್ಚಾಡಿಯನ್ ಬಳಿಕ ತಮಿಳು ಚಿತ್ರಗಳಲ್ಲಿ ನಟಿಸಿಲ್ಲ ಎಂದು ದೀಪಿ ಬಳಿ ಕೇಳಿದರು, ಆಗ ಆಕೆ ಯಾವ ಭಾಷೆಯ ಚಿತ್ರವಾದರೂ ನಟಿಸಲು ತಾನು ಸಿದ್ಧ ಹಾಗೂ ಹೀರೋ ಬಗ್ಗೆ ಹೆಚ್ಚು ಆದ್ಯತೆ ನೀಡಲ್ಲ ಎಂದು ಹೇಳಿದ್ದಲ್ಲದೆ, ತನ್ನ ಪಾತ್ರಕ್ಕೆ ಪ್ರಾಮುಖ್ಯತೆ ಇದೆಯೇ ಎನ್ನುವ ಸಂಗತಿಗೆ ಹೆಚ್ಚು ಗಮನ ನೀಡುತ್ತೇನೆ. ರಜನಿಕಾಂತ್ ಅವರ ಜೊತೆ ಕೊಚ್ಚಾಡಿಯನ್ ಅಭಿನಯ ಚೆನ್ನಾಗಿತ್ತು ಎಂದು ಈ ಸಂದರ್ಭದಲ್ಲಿ ಹೇಳಿದ್ದಾಳೆ.
 
ಅದೇ ರೀತಿ ನಿರ್ದೇಶಕ ಮಣಿರತ್ನಂ ಅವರ ಜೊತೆ ಕೆಲಸ ಮಾಡುವ ಆಸೆ ಇದೆ, ಈ ಮೊದಲು ಅವರ ನಿರ್ದೇಶನದ ಚಿತ್ರದಲ್ಲಿ ನಟಿಸುವ ಅವಕಾಶ ದೊರೆತಿದ್ದರು, ತಾನು ಅನಿವಾರ್ಯ ಕಾರಣಗಳಿಂದ ನಟಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾಳೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments