ಪುನೀತ್ ಪಿಎ ಎಂದು ಸುಳ್ಳು ಹೇಳಿ ಆತ ಮಾಡಿದ ಖತರನಾಕ್ ಕೆಲಸವೇನು ಗೊತ್ತೇ?

Webdunia
ಶನಿವಾರ, 14 ಜುಲೈ 2018 (13:58 IST)
ಬೆಂಗಳೂರು : ಇತ್ತೀಚೆಗಷ್ಟೇ ಸ್ಯಾಂಡಲ್ ವುಡ್ ನಟ ದರ್ಶನ್ ಅವರ  ಮ್ಯಾನೆಜರ್ ದರ್ಶನ್ ಅವರಿಗೆ ಮೋಸ ಮಾಡಿ ಹಣ ದೋಚಿಕೊಂಡು ಹೋದ ಘಟನೆ ಬಗ್ಗೆ ಎಲ್ಲರಿಗೂ ತಿಳಿದಿದೆ. ಆದರೆ ಇದೀಗ ಮತ್ತೊಬ್ಬ ಸ್ಯಾಂಡಲ್ ವುಡ್ ನಟನ  ಪಿಎ ಎಂದು ಹೇಳಿಕೊಂಡು ಹಣ ಸಂಗ್ರಹ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ.


ಹೌದು. ರವಿ ಎಂಬಾತ ತಾನು ಪವರ್‍ ಸ್ಟಾರ್‍ ಪುನೀತ್ ರಾಜ್ ಕುಮಾರ್ ಪಿಎ ಅಂತ ಹೇಳಿಕೊಂಡು ತನ್ನ ತಂಗಿ ಮದುವೆಗಾಗಿ ಹಣ ಸಂಗ್ರಹಮಾಡಿ, ಅದ್ದೂರಿಯಾಗಿ ಮದುವೆ ಮಾಡಿದ್ದಾನಂತೆ. ಮೈಸೂರು ಜಿಲ್ಲೆ ಟಿ.ನರಸೀಪುರದ ಬನ್ನೂರಿನವನಾದ ರವಿ ಕಳೆದ 20 ವರ್ಷಗಳಿಂದ ಬೆಂಗಳೂರಿನ ವಾಸವಿದ್ದನು ಎನ್ನಲಾಗಿದೆ.


ಆದರೆ ಇತ್ತೀಚೆಗೆ ರವಿ ತನ್ನ ತಂಗಿ ಮದುವೆಗೆ ಹಣ ಹೊಂದಿಸುವ ಉದ್ದೇಶದಿಂದ ಊರಿಗೆ ಹೋಗಿ ಸಂಬಂಧಿಕರು, ಸ್ನೇಹಿತರಿಗೆ ನಾನು ಪುನೀತ್ ರಾಜ್ ಕುಮಾರ್ ಪಿಎಯಾಗಿದ್ದು, ನಿಮಗೆ ಸಿನಿಮಾದಲ್ಲಿ ಚಾನ್ಸ್ ಸೇರಿದಂತೆ ಪುನೀತ್ ಜೊತೆ ಕೆಲಸ ಮಾಡುವ ಅವಕಾಶ ನೀಡುತ್ತೇನೆ ಎಂದು ಹೇಳಿ , ಈಗ ಸದ್ಯಕ್ಕೆ ನನ್ನ ತಂಗಿ ಮದುವೆಗೆ ಹಣದ ಅವಶ್ಯಕತೆ ಇದ್ದು, ನನಗೆ ಹಣ ನೀಡಿ ಅಂತ ಮನವಿ ಮಾಡಿಕೊಂಡಿದ್ದಾನೆ. ಆದಕಾರಣ ರವಿ ಸ್ನೇಹಿತರು ಹಾಗೂ ಸಂಬಂಧಿಕರು ಲಕ್ಷ ಗಟ್ಟಲೇ ಹಣ ನೀಡಿದ್ದಾರಂತೆ.


ಆದರೆ ತಂಗಿ ಮದುವೆ ಮಾಡಿದ ನಂತರ ಆತ ತನ್ನ ಫೋನ್ ಅನ್ನು ಸ್ವೀಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾನೆ. ಈ ಸಂಬಂಧ ಬನ್ನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರವಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಮುಂದಿನ ಸುದ್ದಿ
Show comments