Webdunia - Bharat's app for daily news and videos

Install App

ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ: ಡಿ ಬಾಸ್ ದರ್ಶನ್ ಹೆಸರು ಕೈಬಿಟ್ಟ ಪೊಲೀಸರು

Webdunia
ಮಂಗಳವಾರ, 12 ಡಿಸೆಂಬರ್ 2023 (11:05 IST)
ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ದೋಷಾರೋಪ ಪಟ್ಟಿಯಿಂದ ನಟ ದರ್ಶನ್ ಹೆಸರು ಕೈ ಬಿಟ್ಟಿದ್ದಾರೆ.

ದರ್ಶನ್ ಮನೆ ಬಳಿ ಮಹಿಳೆಗೆ ಅವರ ನಾಯಿ ಕಚ್ಚಿತ್ತು. ಈ ಸಂಬಂಧ ದರ್ಶನ್ ಮನೆ ಸಿಬ್ಬಂದಿ ಮತ್ತು ಮಹಿಳೆ ನಡುವೆ ವಾಗ್ವಾದವಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಮಹಿಳೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಎಫ್ಐಆರ್ ದಾಖಲಿಸಿದ ಪೊಲೀಸರು ನಟ ದರ್ಶನ್ ರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದರು. ಮಹಿಳೆ ದೂರಿನಲ್ಲಿ ದರ್ಶನ್ ರನ್ನು ಎರಡನೇ ಆರೋಪಿಯಾಗಿ ಮಾಡಿ ದೂರು ನೀಡಿದ್ದರು.

ಆದರೆ ಇದೀಗ ಪ್ರಕರಣದಲ್ಲಿ ದರ್ಶನ್ ಕೈವಾಡವಿಲ್ಲ ಎಂಬುದು ತನಿಖೆಯಲ್ಲಿ ತಿಳಿದುಬಂದಿದ್ದರಿಂದ ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ನಟನ ಹೆಸರು ಕೈ ಬಿಟ್ಟಿದ್ದಾರೆ. ಪ್ರಕರಣ ನಡೆಯುವ ಸಂದರ್ಭದಲ್ಲಿ ದರ್ಶನ್ ಮನೆಯಲ್ಲಿರಲಿಲ್ಲ. ಇದರಲ್ಲಿ ನನ್ನ ಕೈವಾಡವಿಲ್ಲ ಎಂದು ದರ್ಶನ್ ಕೂಡಾ ವಿಚಾರಣೆ ವೇಳೆ ಹೇಳಿದ್ದರು. ಇನ್ನು ಮುಂದೆ ಹೀಗಾಗದಂತೆ ನೋಡಿಕೊಳ್ಳುತ್ತೇನೆ ಎಂದೂ ಭರವಸೆಎ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಒಟ್ಟಿಗೆ ಫೋಸ್ ಕೊಟ್ಟ ಶ್ರೀಲೀಲಾ, ಸಮಂತಾ ರುತ್ ಪ್ರಭು, ಹಾಟ್‌ ಲುಕ್‌ಗೆ ಎಲ್ಲರೂ ಫಿದಾ

ಮಡೆನೂರು ಮನುಗೆ ಶಿವಣ್ಣ ಗೇಟ್ ತೆರೆಯದೇ ಇದ್ದಿದ್ದು ನಿಜಾನಾ

ವೈಷ್ಣವಿ ಗೌಡ ಕತ್ತಲ್ಲಿ ತಾಳಿ ಇಲ್ಲ, ಆಷಾಢ ಮಾಸದಲ್ಲಿ ಹನಿಮೂನ್: ಏನಮ್ಮಾ ನಿನ್ ಅವಸ್ಥೆ

ಮುಂದಿನ ಸುದ್ದಿ
Show comments