Webdunia - Bharat's app for daily news and videos

Install App

ಹಿಂದಿ ಭಾಷೆಯನ್ನು ನಮ್ಮ ಮೇಲೆ ಹೇರಬೇಡಿ: ಪವನ್ ಕಲ್ಯಾಣ್‌ಗೆ ಪ್ರಕಾಶ್‌ ರಾಜ್‌ ಕೌಂಟರ್‌

Sampriya
ಶನಿವಾರ, 15 ಮಾರ್ಚ್ 2025 (19:08 IST)
Photo Courtesy X
ಚೆನ್ನೈ (ತಮಿಳುನಾಡು): ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಹಿಂದಿ ಭಾಷೆಯ ಕುರಿತು ಇತ್ತೀಚೆಗೆ ಮಾಡಿದ ಹೇಳಿಕೆಗಳಿಗಾಗಿ ನಟ-ರಾಜಕಾರಣಿ ಪ್ರಕಾಶ್ ರಾಜ್ ಅವರು ಕಟುವಾದ ವಾಗ್ದಾಳಿ ನಡೆಸಿದ್ದಾರೆ.

ನಟ ಕಲ್ಯಾಣ್ ಅವರನ್ನು ಶನಿವಾರ ತಮ್ಮ ಎಕ್ಸ್ ಖಾತೆಯಲ್ಲಿ ತರಾಟೆಗೆ ತೆಗೆದುಕೊಂಡು, ಇತರರ ಮೇಲೆ "ಹಿಂದಿ ಹೇರಲು" ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಪ್ರಕಾಶ್ ರಾಜ್ ಅವರು,  "ನಿಮ್ಮ ಹಿಂದಿ ಭಾಷೆಯನ್ನು ನಮ್ಮ ಮೇಲೆ ಹೇರಬೇಡಿ. ಇದು ಬೇರೆ ಭಾಷೆಯನ್ನು ದ್ವೇಷಿಸುವ ಬಗ್ಗೆ ಅಲ್ಲ; ಇದು ನಮ್ಮ ಮಾತೃಭಾಷೆ ಮತ್ತು ನಮ್ಮ ಸಾಂಸ್ಕೃತಿಕ ಗುರುತನ್ನು ಸ್ವಾಭಿಮಾನದಿಂದ ರಕ್ಷಿಸುವ ಬಗ್ಗೆ. ಯಾರಾದರೂ, ದಯವಿಟ್ಟು ಪವನ್ ಕಲ್ಯಾಣ್ ಅವರಿಗೆ ಇದನ್ನು ವಿವರಿಸಿ." ಎಂದಿದ್ದಾರೆ.

ಕಾಕಿನಾಡದ ಪಿತಾಮಪುರದಲ್ಲಿ ನಡೆದ ಜನ ಸೇನಾ ಪಕ್ಷದ 12 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಕಲ್ಯಾಣ್ ಅವರ ಇತ್ತೀಚಿನ ಭಾಷಣಕ್ಕೆ ಪ್ರತಿಕ್ರಿಯೆಯಾಗಿ ಪ್ರಕಾಶ್ ರಾಜ್ ಅವರು ಕೌಂಟರ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments