ಡಾ.ರಾಜ್ ಕುಮಾರ್ ಪುಣ್ಯತಿಥಿ: ಅಣ್ಣಾವ್ರು ಕೊನೆಯದಾಗಿ ಸೇವಿಸಿದ ಆಹಾರ ಇದುವೇ

Krishnaveni K
ಶುಕ್ರವಾರ, 12 ಏಪ್ರಿಲ್ 2024 (09:11 IST)
Photo Courtesy: Twitter
ಬೆಂಗಳೂರು: ಕನ್ನಡಿಗರ ಕಣ್ಮಣಿ, ವರನಟ ಡಾ.ರಾಜ್ ಕುಮಾರ್ ಅವರ ಪುಣ್ಯತಿಥಿ ಇಂದು. 2006 ರ ಏಪ್ರಿಲ್ 12 ರಂದು ಡಾ.ರಾಜ್ ಕುಮಾರ್ ಎಂಬ ಮೇರು ನಟ ನಮ್ಮನ್ನೆಲ್ಲಾ ಅಗಲಿದ್ದರು.

ಎಷ್ಟೇ ದೊಡ್ಡ ನಟನಾದರೂ ಅಣ್ಣಾವ್ರು ಇಂದಿಗೂ ಅಭಿಮಾನಿಗಳ ಮೇಲಿನ ಪ್ರೀತಿ, ಸರಳತೆ, ಮುಗ್ಧತೆಯಿಂದಲೇ ಎಲ್ಲರ ಮಾನಸದಲ್ಲಿ ಚಿರಸ್ಥಾಯಿಯಾಗಿದ್ದಾರೆ. ಯೋಗ ಮಾಡಿಕೊಂಡು ಆರೋಗ್ಯವಾಗಿದ್ದ ಅವರಿಗೆ ಕೊನೆಗಾಲದಲ್ಲಿ ಮಂಡಿ ನೋವು ತೀರಾ ತೊಂದರೆ ಕೊಟ್ಟಿತ್ತು. ಹೀಗಾಗಿ ಅಭಿನಯ ಅಪರೂಪವಾಗಿತ್ತು.

ಅಣ್ಣಾವ್ರು ತೀರಿಕೊಂಡಾಗ ಅವರಿಗೆ 76 ವರ್ಷವಾಗಿತ್ತು. ಸದಾಶಿವನಗರದ ತಮ್ಮ ಮನೆಯಲ್ಲಿಯೇ ಅವರು ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದರು. ಅವರು ತೀರಿಕೊಂಡ ಸುದ್ದಿ ಕೇಳಿ ಇಡೀ ಕರ್ನಾಟಕವೇ ಶೋಕಸಾಗರದಲ್ಲಿ ಮುಳುಗಿತ್ತು. ಅಭಿಮಾನಿಗಳು ದಾಂಧಲೆ ಎಬ್ಬಿಸಿದ್ದರು.

ಕೊನೆಯ ಗಳಿಗೆಯಲ್ಲಿ ಅಣ್ಣಾವ್ರು ಉಪ್ಪಿಟ್ಟು ತಿಂದಿದ್ದರಂತೆ. ಅಣ್ಣಾವ್ರಿಗೆ ಉಪ್ಪಿಟ್ಟು ಎಂದರೆ ಭಾರೀ ಇಷ್ಟ. ಹೀಗಾಗಿ ಅವರೇ ಕೇಳಿ ಮಾಡಿಸಿಕೊಂಡಿದ್ದರು ಎಂದು ಪಾರ್ವತಮ್ಮ ರಾಜ್ ಕುಮಾರ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments