ಯಶ್ ಗೆ ದಾದಾ ಸಾಹೇಬ್ ಪ್ರಶಸ್ತಿ: ವಿವಾದಕ್ಕೆ ಸ್ಪಷ್ಟನೆ ಕೊಟ್ಟ ಡಾ. ರಾಜ್ ಅಭಿಮಾನಿ ಬಳಗ

Webdunia
ಮಂಗಳವಾರ, 24 ಸೆಪ್ಟಂಬರ್ 2019 (07:38 IST)
ಬೆಂಗಳೂರು: ಡಾ. ರಾಜ್ ಕುಮಾರ್ ಗೆ ದಾದಾ ಸಾಹೇಬ್ ಫಾಲ್ಕೆ ಸಿಕ್ಕಿದ ನಂತರ ಕನ್ನಡ ನಟರೊಬ್ಬರಿಗೆ ಇದೇ ಹೆಸರಿನಲ್ಲಿ ಪ್ರಶಸ್ತಿ ಸಿಕ್ಕಿದೆಯೆಂದರೆ ಅದು ರಾಕಿಂಗ್ ಸ್ಟಾರ್ ಯಶ್ ಗೆ. ಆದರೆ ಇಬ್ಬರಿಗೂ ಸಿಕ್ಕಿದ ಪ್ರಶಸ್ತಿಯೇ ಬೇರೆ ಬೇರೆ!


ಯಶ್ ಗೆ ದಾದಾ ಸಾಹೇಬ್ ಪ್ರತಿಷ್ಠಾನದ ವತಿಯಿಂದ ಪ್ರಶಸ್ತಿ ಸಿಕ್ಕಿದ್ದರೆ, ಡಾ. ರಾಜ್ ಗೆ ಸ್ವತಃ ಭಾರತ ಸರ್ಕಾರ ಈ ಗೌರವ ನೀಡಿತ್ತು. ಹಾಗಿದ್ದರೂ ಕೆಲವರು ಯಶ್ ಗೆ ದಾದಾ ಸಾಹೇಬ್ ಪ್ರಶಸ್ತಿ ಸಿಕ್ಕಿರುವುದಕ್ಕೆ ರಾಜ್ ನಂತರ ಈ ಪ್ರಶಸ್ತಿ ಪಡೆದ ನಟ ಎಂದು ಹೊಗಳುತ್ತಿರುವುದು ರಾಜ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಡಾ. ರಾಜ್ ಗೆ ಯಾರೂ ಸಾಟಿಯಿಲ್ಲ. ರಾಜ್ ಅವರಿಗೆ ಸರಿಸಮನಾದ ನಟ ಇನ್ನೊಬ್ಬರಿರಲಿಲ್ಲ, ಮತ್ತು ಇನ್ನು ಮುಂದೆ ಬರಲೂ ಸಾಧ್ಯವಿಲ್ಲ. ಹಾಗಿದ್ದರೂ ಕೆಲವರು ಇದನ್ನೇ ತಪ್ಪಾಗಿ ತಿಳಿದುಕೊಂಡು ರಾಜ್ ರನ್ನು ಸರಿಗಟ್ಟುವ ನಟ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಅಣ್ಣಾವ್ರ ಸರಿಗಟ್ಟುವ ನಟ ಇನ್ನೂ ಬಂದಿಲ್ಲ ಎಂದು ರಾಜ್ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಸ್ಪಷ್ಟನೆ ನೀಡಿ ವಿವಾದಕ್ಕೆ ತೆರೆ ಎಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments