ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಬೆನ್ನಲ್ಲೇ ಕುಟುಂಬಸ್ಥರಿಂದ ಮಹತ್ವದ ನಿರ್ಧಾರ

Krishnaveni K
ಶುಕ್ರವಾರ, 12 ಸೆಪ್ಟಂಬರ್ 2025 (09:33 IST)
ಬೆಂಗಳೂರು: ಸಾಹಸಸಿಂಹ ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಘೋಷಣೆಯಾದ ಬೆನ್ನಲ್ಲೇ ಕುಟುಂಬಸ್ಥರಿಂದ ಮಹತ್ವದ ತೀರ್ಮಾನ ಹೊರಬಿದ್ದಿದೆ. ಇದು ಅಭಿಮಾನಿಗಳೂ ಖುಷಿಪಡುವ ವಿಚಾರ.

ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಸಿಗಬೇಕು ಎನ್ನುವುದು ಅಭಿಮಾನಿಗಳ ಬಹುದಿನಗಳ ಬಯಕೆಯಾಗಿತ್ತು. ಅದೀಗ ಈಡೇರಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ವಿಷ್ಣುವರ್ಧನ್ ಮತ್ತು ಬಿ ಸರೋಜಾದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲಾಗಿದೆ.

ಇದು ಅಭಿಮಾನಿಗಳ ಸಂತೋಷ ಹೆಚ್ಚಿಸಿದೆ. ಇದರ ಬೆನ್ನಲ್ಲೇ ವಿಷ್ಣುವರ್ಧನ್ ಕುಟುಂಬದ ಪರವಾಗಿ ಅಳಿಯ ಅನಿರುದ್ಧ ಜತಕರ ಮತ್ತೊಂದು ಘೋಷಣೆ ಮಾಡಿದ್ದಾರೆ. ಇತ್ತೀಚೆಗಷ್ಟೇ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡಲಾಗಿತ್ತು. ಇದು ಅಭಿಮಾನಿಗಳಿಗೆ ನೋವು ತರಿಸಿತ್ತು.

ಇದೇ ಜಾಗದಲ್ಲಿ ಮತ್ತೆ ಅಭಿಮಾನಗಳಿಗೆ ಸಮಾಧಿ ನಿರ್ಮಿಸಲು 10 ಗುಂಟೆ ಜಮೀನು ನೀಡಬೇಕು ಎಂದು ಕುಟುಂಬಸ್ಥರೂ ಸಿಎಂಗೆ ಮನವಿ ಮಾಡಿದ್ದಾರೆ. ಇದೀಗ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆಯಾದ ಬಳಿಕ ಮಾತನಾಡಿರುವ ಅನಿರುದ್ಧ ಅವರು, ಅದೇ ಜಾಗದಲ್ಲಿ ಸಮಾಧಿ ನಿರ್ಮಾಣವಾಗಬೇಕು. ಈ ಬಗ್ಗೆ ಈಗಾಗಲೇ ಸಿಎಂಗೂ ಮನವಿ ಮಾಡಿದ್ದೇವೆ. ಅವರು ಸ್ಪಂದಿಸಿದ್ದಾರೆ. ಮಂಟಪ ನಿರ್ಮಾಣಕ್ಕೆ ನಾವೇ ಖರ್ಚು ಹಾಕಿ ನಿರ್ಮಾಣ ಮಾಡುತ್ತೇವೆ ಎಂದು ಅವರು ಘೋಷಿಸಿದ್ದಾರೆ. ಈ ಕೆಲಸವೂ ಬೇಗನೇ ಆಗಲಿ ಎಂಬುದೇ ಅಭಿಮಾನಿಗಳ ಬಯಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments