Webdunia - Bharat's app for daily news and videos

Install App

ಸಾಹಸಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಗೆ ದಿನಾಂಕ ನಿಗದಿ

Webdunia
ಗುರುವಾರ, 12 ಜನವರಿ 2023 (16:46 IST)
Photo Courtesy: Twitter
ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಮೈಸೂರಿನಲ್ಲಿ ನಿರ್ಮಾಣವಾದ ಸ್ಮಾರಕ ಉದ್ಘಾಟನೆಗೆ ಕೊನೆಗೂ ಮುಹೂರ್ತ ಕೂಡಿಬಂದಿದೆ.

ಜನವರಿ 29 ರಂದು ಭಾನುವಾರ ಮೈಸೂರಿನಲ್ಲಿ ಸ್ಮಾರಕ ಲೋಕಾರ್ಪಣೆಯಾಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಸ್ಮಾರಕ ಉದ್ಘಾಟಿಸಲಿದ್ದಾರೆ. ಈ ವೇಳೆ ವಿಷ್ಣುವರ್ಧನ್ ಕುಟುಂಬ ವರ್ಗದವರು ಉಪಸ್ಥಿತರಿರಲಿದ್ದಾರೆ.

‘ತಾವೆಲ್ಲರೂ ಅಭಿಮಾನಿಗಳು ಇಷ್ಟು ದಿನ ಕಾಯುತ್ತಿದ್ದಿರಿ. ಅದು ಈವತ್ತು ಈಡೇರುತ್ತಿದೆ. ಈ ಒಂದು ಕಾರ್ಯಕ್ರಮಕ್ಕೆ ತಾವೆಲ್ಲರೂ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಬಂದು ಅಪ್ಪಾವ್ರು ಡಾ. ವಿಷ್ಣುವರ್ಧನ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಬೇಕೆಂದು ಕೇಳಿಕೊಳ್ಳುತ್ತೇನೆ’ ಎಂದು ವಿಷ್ಣುವರ್ಧನ್ ಅಳಿಯ, ನಟ ಅನಿರುದ್ಧ್ ಜತ್ಕಾರ್ ಮನವಿ ಮಾಡಿದ್ದಾರೆ.

ಎಲ್ಲಾ ಅಂದುಕೊಂಡಂತೇ ಆಗಿದ್ದರೆ ಡಿಸೆಂಬರ್ 18 ರಂದು ಸ್ಮಾರಕ ಉದ್ಘಾಟನೆಯಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ಮುಂದೂಡಿಕೆಯಾಗುತ್ತಲೇ ಇತ್ತು. ಕೊನೆಗೂ ಈಗ ಮುಹೂರ್ತ ಕೂಡಿಬಂದಿದೆ. ಮೈಸೂರಿನ ಎಚ್.ಡಿ. ಕೋಟೆ ತಾಲೂಕಿನ ಹಾಲಾಳು ಸಮೀಪ ಸ್ಮಾರಕ ನಿರ್ಮಾಣವಾಗಿದೆ.

ವಿಷ್ಣುವರ್ಧನ್ ಅವರ ಚಿತಾಭಸ್ಮವನ್ನು ಇರಿಸಿ ಪುತ್ಥಳಿ ನಿರ್ಮಿಸಲಾಗಿದೆ. ಅವರ ಸುಮಾರು 600 ಫೋಟೋಗಳ ಗ್ಯಾಲರಿ ಕೂಡಾ ಇಲ್ಲಿರಲಿದೆ. ಜೊತೆಗೆ ವಿಷ್ಣುವರ್ಧನ್ ಅವರಿಗೆ ಸಂಬಂಧಿಸಿದ ಗ್ಯಾಲರಿ, ಅಡಿಟೋರಿಯಂ, ಕ್ಲಾಸ್ ರೂಂ, ಕ್ಯಾಂಟೀನ್ ಏರಿಯಾ ಸೇರಿದಂತೆ ಹಲವು ವಿಶೇಷತೆಗಳು ಇಲ್ಲಿರಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments