Webdunia - Bharat's app for daily news and videos

Install App

ಇತ್ಯರ್ಥ ಕಂಡ ದುನಿಯಾ ವಿಜಿ ಪತ್ನಿ ನಾಗರತ್ನ ಕೋರಿದ್ದ ಜೀವನಾಂಶ ಅರ್ಜಿ

Webdunia
ಶನಿವಾರ, 15 ನವೆಂಬರ್ 2014 (16:43 IST)
ಕನ್ನಡದ ಖ್ಯಾತ ನಟ ದುನಿಯಾ ವಿಜಿ ಅವರ ಪತ್ನಿ ನಾಗರತ್ನ ಅವರು ಜೀವನಾಂಶ ಕೋರಿ ಸಲ್ಲಿಸಿದ್ದ ಅರ್ಜಿ ಇತ್ಯರ್ಥವಾಗಿದ್ದು ನಾಗರತ್ನಳಿಗೆ ಪ್ರತಿ ತಿಂಗಳು 30,000 ರೂಪಾಯಿ ಜೀವನಾಂಶವನ್ನು ನೀಡಬೇಕು ಎಂದು ಕೋರ್ಟ್ ಆದೇಶಿಸಿದೆ.

ಆದರೆ ಕೋರ್ಟ್ ನಾಗರತ್ನ ಅವರಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ನಾಗರತ್ನ ದುನಿಯಾ ವಿಜಿ ನಿವಾಸದ ಹತ್ತಿರ ಹೋಗುವಂತಿಲ್ಲ, ಅವರ ಮನೆ ಎದುರು ಹೋಗಿ ಜಗಳವಾಡುವಂತಿಲ್ಲ, ಸ್ಕೂಲ್ ಬಳಿ ಹೋಗಿ ಮಕ್ಕಳನ್ನು ಮಾತನಾಡಿಸುವಂತಿಲ್ಲ ಮತ್ತು ವಿಜಿ ವಿರುದ್ಧ ಮಾಧ್ಯಮಗಳಲ್ಲಿ ಹೇಳಿಕೆ ನೀಡುವಂತಿಲ್ಲ ಎಂದು  ಕೋರ್ಟ್ ಸೂಚಿಸಿದೆ. 
 
ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ಈ ಆದೇಶವನ್ನು ನೀಡಿದೆ. ನಾಗರತ್ನ ಪದೇ ಪದೇ ತಮ್ಮ ಮನೆ ಬಳಿ ಬಂದು ಗಲಾಟೆ ಮಾಡುತ್ತಿರುವುದು ತಮ್ಮ ಪ್ರತಿಷ್ಠೆಗೆ ಧಕ್ಕೆ ತರುತ್ತಿದೆ ಎಂದು ವಿಜಿ ಕೋರ್ಟ‌್‌ನಲ್ಲಿ ಹೇಳಿಕೆ ನೀಡಿದ್ದರು.  
 
ನಾಗರತ್ನರವರು ತಮಗೆ ತಿಂಗಳಿಗೆ 60 ಸಾವಿರ ರೂಪಾಯಿ ಜೀವನಾಂಶ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದರು. ಆದರೆ ದುನಿಯಾ ವಿಜಿಯವರು ತಾನು ಅಷ್ಟು ಹಣ ನೀಡಲು ಸಮರ್ಥನಲ್ಲ, ಈ ಮೊತ್ತವನ್ನು ತಗ್ಗಿಸಬೇಕು ಎಂದು ನ್ಯಾಯಾಧೀಶರಲ್ಲಿ ಕೇಳಿಕೊಂಡಿದ್ದರು. ಅವರ ಮನವಿಯನ್ನು ಪುರಷ್ಕರಿಸಿರುವ ಕೋರ್ಟ್ 30.000 ರೂಪಾಯಿ ಜೀವನಾಂಶವನ್ನು ನೀಡುವಂತೆ ಆದೇಶಿಸಿದೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments