Webdunia - Bharat's app for daily news and videos

Install App

ಭೀಮ ಯಶಸ್ಸಿನ ನಡುವೆ ಕೆಣಕಿದವರಿಗೆ ಇದೇ ಉತ್ತರ ಎಂದ ದುನಿಯಾ ವಿಜಯ್

Krishnaveni K
ಗುರುವಾರ, 15 ಆಗಸ್ಟ್ 2024 (12:32 IST)
ಬೆಂಗಳೂರು: ಎರಡನೇ ಬಾರಿಗೆ ನಿರ್ದೇಶಕರಾಗಿ ದುನಿಯಾ ವಿಜಯ್ ಗೆದ್ದಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಅವರ ಭೀಮ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಗಳಿಕೆ ಮಾಡಿದೆ. ಈ ಯಶಸ್ಸು ನನ್ನ ಕೆಣಕಿದವರಿಗೆ ಉತ್ತರ ಎಂದಿದ್ದಾರೆ.

ಭೀಮ ಸಿನಿಮಾ ಕಳೆದ ಶುಕ್ರವಾರ ಬಿಡುಗಡೆಯಾಗಿತ್ತು. ಮೊದಲ ಮೂರು ದಿನದಲ್ಲೇ 10 ಕೋಟಿ ರೂ. ಕಲೆಕ್ಷನ್ ದಾಟಿತ್ತು. ಈ ಸಿನಿಮಾ ಬಿಡುಗಡೆಗೆ ಮುನ್ನ ದರ್ಶನ್ ಫ್ಯಾನ್ಸ್ ಬಹಿಷ್ಕಾರದ ಅಭಿಯಾನ ಮಾಡಿದ್ದರು. ಆದರೆ ಎಲ್ಲವನ್ನೂ ಮೀರಿ ಭೀಮ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಯಶಸ್ಸು ಕಂಡಿದ್ದಾನೆ.

ಈ ಯಶಸ್ಸಿನಿಂದ ಉಬ್ಬಿಹೋಗಿರುವ ದುನಿಯಾ ವಿಜಯ್ ಈ ಯಶಸ್ಸು ನನ್ನ ಕೆಣಕಿದವರಿಗೆ ಉತ್ತರ ಎಂದಿದ್ದಾರೆ. ನನಗೆ ಸ್ವತಂತ್ರವಾಗಿ ಸಿನಿಮಾ ಮಾಡಲು ಅವಕಾಶ ಕೊಟ್ಟ ನಿರ್ಮಾಪಕರಿಗೂ ಧನ್ಯವಾದ ಸಲ್ಲಿಸಿದ್ದಾರೆ. ಈ ಸಿನಿಮಾ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ಕೊಟ್ಟ ತೃಪ್ತಿ ಅವರಿಗಿದೆ.

ಇತ್ತೀಚೆಗೆ ಕನ್ನಡ ಸಿನಿಮಾಗಳು ಸಕ್ಸಸ್ ಕಾಣುತ್ತಿಲ್ಲ ಎಂಬ ಅಪವಾದಗಳಿವೆ. ಆದರೆ ಭೀಮ ಅದನ್ನು ತೊಡೆದು ಹಾಕಿದೆ. ಸ್ಟಾರ್ ಸಿನಿಮಾಗಳು ಬಿಡುಗಡೆಯಾದರೆ ಪ್ರೇಕ್ಷಕರು ಥಿಯೇಟರ್ ಗೆ ಬಂದೇ ಬರುತ್ತಾರೆ, ಕನ್ನಡ ಚಿತ್ರರಂಗ ಗೆದ್ದೇ ಗೆಲ್ಲುತ್ತದೆ ಎಂಬುದಕ್ಕೆ ಭೀಮ ಸಿನಿಮಾ ಉತ್ತರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments