Webdunia - Bharat's app for daily news and videos

Install App

ಹೈಕೋರ್ಟ್‌ನಲ್ಲಿ ಬೇಲ್ ಸಿಕ್ಕರೂ ದರ್ಶನ್‌ಗೆ ಮುಗಿಯದ ಸಂಕಷ್ಟ, ಬೆಂಗಳೂರು ಪೊಲೀಸರು ಸುಪ್ರೀಂ ಮೆಟ್ಟಿಲೇರಿದ್ದೇಕೆ

Sampriya
ಬುಧವಾರ, 22 ಜನವರಿ 2025 (19:01 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಮೂಲಕ ಹೊರ ಬಂದಿರುವ ನಟ ದರ್ಶನ್‌ಗೆ ಒಂದಲ್ಲ ಒಂದು ಸಂಕಷ್ಟ ತಪ್ಪಿದಲ್ಲ. ಇದೀಗ ಕೊಲೆ ಪ್ರಕರಣ ಆರೋಪಿ ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದುಕೋರಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಹೈಕೋರ್ಟ್ ಜಾಮೀನು ಆದೇಶ, ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಮತ್ತು ದೂರಿನ ಪ್ರತಿ, ಮರಣೋತ್ತರ ಪರೀಕ್ಷೆಯ ವರದಿ, ಆರೋಪಿಗಳ ಗ್ರೌಂಡ್ಸ್ ಆಫ್ ಅರೆಸ್ಟ್, ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂತಿಮ ವರದಿಯ ತರ್ಜುಮೆ ಪ್ರತಿ ಎಲ್ಲವನ್ನೂ ಸೇರಿ ಅರ್ಜಿ ಸಲ್ಲಿಸಿದ್ದಾರೆ.

ಇನ್ನೂ ಪ್ರಕರಣ ಸಂಬಂಧ ತನಿಖೆಯಲ್ಲಿ ಕಲೆ ಹಾಕಿದ ಪ್ರತ್ಯಕ್ಷ ದರ್ಶಿಗಳ ಹೇಳಿಕೆಯ ತರ್ಜುಮೆ ಕಾಪಿ, ಮರಣೋತ್ತರ ಪರೀಕ್ಷೆಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಸಿಡಿಆರ್, ಪಂಚನಾಮೆ ವರದಿ, ಆರೋಪಿಗಳ ಬಳಿ ವಶಪಡಿಸಿಕೊಂಡ ಡಿಜಿಟಲ್ ವಸ್ತುಗಳ ವಿಶ್ಲೇಷಣೆ ವರದಿಯನ್ನು ಲಗತ್ತಿಸಲಾಗಿದೆ.

ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾ ಆದೇಶ ಪ್ರತಿ, ದರ್ಶನ್‌ಗೆ ನೀಡಿದ್ದ ಮಧ್ಯಂತರ ಜಾಮೀನು ಅದೇಶ ಪ್ರತಿ, ಜೈಲಿನಿಂದ ದರ್ಶನ್ ಬಗ್ಗೆ ಸಲ್ಲಿಕೆಯಾದ ವೈದ್ಯಕೀಯ ವರದಿ, ಬಿಜಿಎಸ್ ಆಸ್ಪತ್ರೆ ವೈದ್ಯರ ವರದಿ ಸೇರಿದಂತೆ ಒಟ್ಟು 15 ಅಂಶಗಳಿಗೆ ಸಂಬಂಧಿಸಿ  ಒಟ್ಟು 1492 ಪುಟಗಳ ಕಡತವನ್ನು  ಕೋರ್ಟ್‌ಗೆ ನೀಡಿದೆ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments