Select Your Language

Notifications

webdunia
webdunia
webdunia
webdunia

ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳಕ್ಕೆ ಇಂದು ಬರಲಿರುವ ಕುಟುಂಬಸ್ಥರು

ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳಕ್ಕೆ ಇಂದು ಬರಲಿರುವ ಕುಟುಂಬಸ್ಥರು
ಬೆಂಗಳೂರು , ಮಂಗಳವಾರ, 2 ನವೆಂಬರ್ 2021 (07:44 IST)
ಬೆಂಗಳೂರು: ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳಕ್ಕೆ ಇಂದು ಕುಟುಂಬಸ್ಥರು ಭೇಟಿ ಕೊಡಲಿದ್ದಾರೆ.

ಪುನೀತ್ ಸಮಾಧಿಗೆ ಹಾಲು ತುಪ್ಪ ಬಿಡುವ ಕಾರ್ಯಕ್ರಮ ಇಂದು ನೆರವೇರಲಿದೆ. ಈ ಕಾರಣಕ್ಕೆ ಪತ್ನಿ ಅಶ್ವಿನಿ, ಪುತ್ರಿಯರು, ಶಿವರಾಜ್ ಕುಮಾರ್ ಸೇರಿದಂತೆ ಕುಟುಂಬಸ್ಥರು ಭಾಗಿಯಾಗಲಿದ್ದಾರೆ.

ಇಂದಿನವರೆಗೆ ಕಂಠೀರವ ಸ್ಟುಡಿಯೋಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಹಾಗಿದ್ದರೂ ಹೊರಗಿನಿಂದಲೇ ಪೂಜೆ ಮಾಡುತ್ತಿದ್ದಾರೆ. ಕುಟುಂಬಸ್ಥರ ಪೂಜೆ ಬಳಿಕ ಸಮಾಧಿ ಸ್ಥಳಕ್ಕೆ ಸಾರ್ವಜನಿಕರಿಗೆ ಪ್ರವೇಶ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ಸಮಾಧಿ ದರ್ಶನಕ್ಕೆ ಸಾರ್ವಜನಿಕರಿಗೆ ಪ್ರವೇಶ ಯಾವಾಗ?