Webdunia - Bharat's app for daily news and videos

Install App

ದರ್ಶನ್ ಬಿಡುಗಡೆಯಾಗುವವರೆಗೂ ಇದನ್ನು ಮುಟ್ಟೋದೇ ಇಲ್ಲ ಎಂದು ಶಪಥ ಮಾಡಿದ ಅಭಿಮಾನಿ

Krishnaveni K
ಬುಧವಾರ, 10 ಜುಲೈ 2024 (10:54 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿದ ಮೇಲೆ ಅಭಿಮಾನಿಗಳು ಒಂದೊಂದು ರೀತಿಯಲ್ಲಿ ಅವರ ಮೇಲೆ ತಮ್ಮ ಅಭಿಮಾನ ಹೊರಹಾಕುತ್ತಿದ್ದಾರೆ.

ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದರೂ ಅವರ ಮೇಲಿನ ಅಭಿಮಾನ ಕೆಲವರಲ್ಲಿ ಈಗಲೂ ಹಾಗೆಯೇ ಉಳಿದುಕೊಂಡಿದೆ. ದರ್ಶನ್ ಗೆ ಜೈಲಿನಲ್ಲಿ ನೀಡಲಾಗಿದ್ದ ಕೈದಿ ನಂಬರ್ ಅನ್ನು ತಮ್ಮ ವಾಹನಗಳಲ್ಲಿ, ಮಕ್ಕಳ ಬಟ್ಟೆಗಳಲ್ಲಿ, ಮೈಮೇಲೆ ಹಚ್ಚೆ ಹಾಕಿಸಿಕೊಳ್ಳುವ ಮೂಲಕ ಅಭಿಮಾನ ತೋರಿಸುತ್ತಿದ್ದಾರೆ.

ಕೆಲವರು ಅತಿರೇಕ ಎನಿಸುವಷ್ಟು ಅಭಿಮಾನ ತೋರ್ಪಡಿಸುತ್ತಿದ್ದಾರೆ. ಇದರ ನಡುವೆ ಅಭಿಮಾನಿಯೊಬ್ಬ ದರ್ಶನ್ ಜೈಲಿನಿಂದ ಬಿಡುಗಡೆಯಾಗುವವರೆಗೂ ಕಾಲಿಗೆ ಚಪ್ಪಲಿ ಹಾಕಲ್ಲ ಎಂದು ಶಪಥ ಮಾಡಿಕೊಂಡಿದ್ದಾನೆ. ಅಷ್ಟೇ ಅಲ್ಲ ತಿರುಪತಿ ತಿಮ್ಮಪ್ಪನಿಗೂ ಹರಕೆ ಕಟ್ಟಿಕೊಂಡಿದ್ದಾನಂತೆ.

ಮಾಧ್ಯಮಗಳ ಮುಂದೆ ಮಾತನಾಡಿರುವ ಧನುಷ್ ಎಂಬ ಅಭಿಮಾನಿ ಡಿ ಬಾಸ್ ಜೈಲಿನಿಂದ ಬಿಡುಗಡೆಯಾಗುವವರೆಗೂ ನಾನು ಚಪ್ಪಲಿ ಧರಿಸಲ್ಲ. ತಿರುಪತಿ ಹೋಗಿ ಮುಡಿ ಕೊಡುವುದಾಗಿ ಹರಕೆ ಕಟ್ಟಿಕೊಂಡಿರುವುದಾಗಿ ಹೇಳಿಕೊಂಡಿದ್ದಾನೆ. ಹೀಗಂತ ದರ್ಶನ್ ಮನೆ ಮುಂದೆ ಬಂದು ನಿಂತು ಹರಕೆ ಹೊತ್ತುಕೊಂಡಿದ್ದಾನೆ. ಡಿ ಬಾಸ್ ಎಂದರೆ ನನಗಿಷ್ಟ. ಡಿ ಬಾಸ್ ಆದಷ್ಟು ಬೇಗ ಬಿಡುಗಡೆಯಾಗಿ ಬರಲಿ. ನಾವು ಫ್ಯಾನ್ಸ್ ಸಂಘ ಯಾವತ್ತೂ ಅವರನ್ನು ಬಿಟ್ಟುಕೊಡಲ್ಲೆಎಂದಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments